August 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪ್ರತಿಯೊಬ್ಬ ಹೆಣ್ಣು ಮಗಳಲ್ಲಿ ಮಾತೆ ಮರಿಯಳನ್ನು ಕಾಣೋಣ – ಬಿಷಪ್ ಪೀಟರ್ ಪಾವ್ಲ್


ಪ್ರತಿಯೊಬ್ಬ ಹೆಣ್ಣು ಮಗಳಲ್ಲಿ ಮಾತೆ ಮರಿಯಳನ್ನು ಕಾಣೋಣ ಎಂದು ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾರವರು ಮೇರಿ ಮಾತೆಯ ವಾರ್ಷಿಕ ಹಬ್ಬ ಮೊಂತಿ ಹಬ್ಬದ ಸಂದರ್ಭದಲ್ಲಿ ಕರೆ ನೀಡಿದರು.
ಓರ್ವ ಹೆಣ್ಣು ಮಗಳ ಜನನ ಕುಟುಂಬದಲ್ಲಿ ಹರ್ಷ ಹಾಗೂ ಭರವಸೆ ಮೂಡಿಸುತ್ತದೆ. ದೇವರ ಯೋಜನೆ ಹಾಗೂ ಮನುಕುಲವನ್ನು ಮುನ್ನಡೆಸುವಲ್ಲಿ ಆಕೆಯ ಪಾತ್ರ ಮಹತ್ವದ್ದಾಗಿದೆ. ಸೃಷ್ಟಿಯ ಕಾರ್ಯದಲ್ಲಿ ದೇವರು ಆಕೆಗೆ ವಿಶೇಷ ಸ್ಥಾನ ಕಲ್ಪಿಸಿದ್ದಾರೆ. ಸಂತ ಜೋಕಿಂ ಹಾಗೂ ಸಂತ ಅನ್ನಾ ಅವರ ಏಕೈಕ ಮಗಳಾಗಿ ಜನಿಸಿದ ಮಾತೆ ಮೇರಿ ಮನುಕುಲಕ್ಕೆ ಹೊಸ ನಿರೀಕ್ಷೆ ತಂದಿಟ್ಟರು.
ಇಂದು ನಮ್ಮ ಸಮಾಜದಲ್ಲಿ ಮಹಿಳೆಯ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರ, ಬಲಾತ್ಕಾರ, ಕೊಲೆ ಇತ್ಯಾದಿಗಳನ್ನು ಗಮನಿಸಿದಾಗ ಮಹಿಳೆಯ ಮೂಲಭೂತ ಹಕ್ಕುಗಳು ಅಪಾಯದಲ್ಲಿದ್ದಂತೆ ತೋರುತ್ತವೆ. ಇಂತಹ ಘಟನೆ ಗಮನಿಸಿದಾಗ ನಾಗರಿಕ ಸಮಾಜ ಸ್ತ್ರೀಯರಿಗೆ ಗೌರವ ನೀಡುವಲ್ಲಿ ಸೋತಿದೆ ಎಂದು ಭಾಸವಾಗುತ್ತಿದೆ. ಮಹಿಳೆಗೆ ಮಾಡುತ್ತಿರುವ ದೌರ್ಜನ್ಯ ಮಾತೆ ಮರಿಯಳಿಗೆ ಮಾಡುವ ಅವಮಾನ. ಇದು ದೇವರು ಮೆಚ್ಚುವ ಕಾರ್ಯವಲ್ಲ. ಪ್ರತಿಯೊಬ್ಬ ಮಹಿಳೆಯು ದೇವ ಮಾತೆಯ ಪ್ರತೀಕ. ಅವರಲ್ಲಿ ಮಾತೆಯ ಪ್ರತಿರೂಪ ಕಂಡುಕೊಳ್ಳಲು ಮಾತೆ ಮರಿಯ ಕರೆ ನೀಡುತ್ತಾರೆ. ಮರಿಯಳ ಜನನದ ಹಬ್ಬವು ಪ್ರತಿಯೊಬ್ಬ ಮಹಿಳೆಗೆ ಗೌರವದಿಂದ ಕಾಣಲು ಒಂದು ಸುಸಂದರ್ಭವಾಗಲಿ. ಸರ್ವರಿಗೂ ಮಾತೆ ಮರಿಯಳ ಜನುಮ ದಿನದ ಶುಭಾಶಯಗಳನ್ನು ಸಲ್ಲಿಸಿದರು.

You may also like

News

ಬೈಂದೂರಿನ ಆಶಾ ವೀಣಾ ಡಯಾಸ್‌ ಅವರಿಗೆ ‘ಕರ್ನಾಟಕ ಶೈಕ್ಷಣಿಕ ಪ್ರಶಸ್ತಿ’ ಗೌರವ

ಶಿಕ್ಷಣ, ನಿರೂಪಣೆ, ಸಹಪಠ್ಯ ಚಟುವಟಿಕೆ ಹಾಗೂ ಸಾಮಾಜಿಕ ಸೇವೆಗೆ ಸಂದ ಪ್ರತಿಷ್ಠಿತ ಮನ್ನಣೆ “ಸಾಧಿಸುವ ಛಲವಿದ್ದರೆ ಅಸಾಧ್ಯವೂ ಸಾಧ್ಯ” ಎಂಬ ಮಾತಿಗೆ ಮತ್ತೊಮ್ಮೆ ಅರ್ಥ ತುಂಬುವಂತೆ, ಉಡುಪಿ
News

ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು, ಭಯ ಮೂಡಿಸುವ ಸಂದೇಶ – ಫೇಸ್‌ಬುಕ್ ಖಾತೆದಾರನ ವಿರುದ್ಧ ಪ್ರಕರಣ

ಪುತ್ತೂರು ದರ್ಭೆ ಪ್ರದೇಶದಲ್ಲಿ ಆಗಸ್ಟ್ 21ರಂದು ಶುಕ್ರವಾರ ಅಂಗಡಿಯೊಂದರಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಹಾಗೂ ಸಾರ್ವಜನಿಕರಲ್ಲಿ ಭಯ ಉಂಟುಮಾಡುವ ರೀತಿಯಲ್ಲಿ ಸಂದೇಶ

You cannot copy content of this page