March 26, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪ್ರತಿಯೊಬ್ಬ ಹೆಣ್ಣು ಮಗಳಲ್ಲಿ ಮಾತೆ ಮರಿಯಳನ್ನು ಕಾಣೋಣ – ಬಿಷಪ್ ಪೀಟರ್ ಪಾವ್ಲ್


ಪ್ರತಿಯೊಬ್ಬ ಹೆಣ್ಣು ಮಗಳಲ್ಲಿ ಮಾತೆ ಮರಿಯಳನ್ನು ಕಾಣೋಣ ಎಂದು ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾರವರು ಮೇರಿ ಮಾತೆಯ ವಾರ್ಷಿಕ ಹಬ್ಬ ಮೊಂತಿ ಹಬ್ಬದ ಸಂದರ್ಭದಲ್ಲಿ ಕರೆ ನೀಡಿದರು.
ಓರ್ವ ಹೆಣ್ಣು ಮಗಳ ಜನನ ಕುಟುಂಬದಲ್ಲಿ ಹರ್ಷ ಹಾಗೂ ಭರವಸೆ ಮೂಡಿಸುತ್ತದೆ. ದೇವರ ಯೋಜನೆ ಹಾಗೂ ಮನುಕುಲವನ್ನು ಮುನ್ನಡೆಸುವಲ್ಲಿ ಆಕೆಯ ಪಾತ್ರ ಮಹತ್ವದ್ದಾಗಿದೆ. ಸೃಷ್ಟಿಯ ಕಾರ್ಯದಲ್ಲಿ ದೇವರು ಆಕೆಗೆ ವಿಶೇಷ ಸ್ಥಾನ ಕಲ್ಪಿಸಿದ್ದಾರೆ. ಸಂತ ಜೋಕಿಂ ಹಾಗೂ ಸಂತ ಅನ್ನಾ ಅವರ ಏಕೈಕ ಮಗಳಾಗಿ ಜನಿಸಿದ ಮಾತೆ ಮೇರಿ ಮನುಕುಲಕ್ಕೆ ಹೊಸ ನಿರೀಕ್ಷೆ ತಂದಿಟ್ಟರು.
ಇಂದು ನಮ್ಮ ಸಮಾಜದಲ್ಲಿ ಮಹಿಳೆಯ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರ, ಬಲಾತ್ಕಾರ, ಕೊಲೆ ಇತ್ಯಾದಿಗಳನ್ನು ಗಮನಿಸಿದಾಗ ಮಹಿಳೆಯ ಮೂಲಭೂತ ಹಕ್ಕುಗಳು ಅಪಾಯದಲ್ಲಿದ್ದಂತೆ ತೋರುತ್ತವೆ. ಇಂತಹ ಘಟನೆ ಗಮನಿಸಿದಾಗ ನಾಗರಿಕ ಸಮಾಜ ಸ್ತ್ರೀಯರಿಗೆ ಗೌರವ ನೀಡುವಲ್ಲಿ ಸೋತಿದೆ ಎಂದು ಭಾಸವಾಗುತ್ತಿದೆ. ಮಹಿಳೆಗೆ ಮಾಡುತ್ತಿರುವ ದೌರ್ಜನ್ಯ ಮಾತೆ ಮರಿಯಳಿಗೆ ಮಾಡುವ ಅವಮಾನ. ಇದು ದೇವರು ಮೆಚ್ಚುವ ಕಾರ್ಯವಲ್ಲ. ಪ್ರತಿಯೊಬ್ಬ ಮಹಿಳೆಯು ದೇವ ಮಾತೆಯ ಪ್ರತೀಕ. ಅವರಲ್ಲಿ ಮಾತೆಯ ಪ್ರತಿರೂಪ ಕಂಡುಕೊಳ್ಳಲು ಮಾತೆ ಮರಿಯ ಕರೆ ನೀಡುತ್ತಾರೆ. ಮರಿಯಳ ಜನನದ ಹಬ್ಬವು ಪ್ರತಿಯೊಬ್ಬ ಮಹಿಳೆಗೆ ಗೌರವದಿಂದ ಕಾಣಲು ಒಂದು ಸುಸಂದರ್ಭವಾಗಲಿ. ಸರ್ವರಿಗೂ ಮಾತೆ ಮರಿಯಳ ಜನುಮ ದಿನದ ಶುಭಾಶಯಗಳನ್ನು ಸಲ್ಲಿಸಿದರು.

You may also like

News

ದಲಿತ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಕೆ ಡಿಎಚ್ಎಸ್ ಒತ್ತಾಯ – ಕಠಿಣ ಕ್ರಮಕ್ಕೆ ಆಗ್ರಹ

ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬವನು ನಿರಂತರ ಲೈಂಗಿಕ ಕಿರುಕುಳ ನೀಡುವ ಮೂಲಕ ಮಾನಸಿಕ
News

ನೇತ್ರದಾನದಿಂದ ಇನ್ನೊಬ್ಬರ ಬಾಳಿಗೆ ಬೆಳಕು – ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ

ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು. ದಕ್ಷಿಣ ಕನ್ನಡ

You cannot copy content of this page