February 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪ್ರತಿಯೊಬ್ಬ ಹೆಣ್ಣು ಮಗಳಲ್ಲಿ ಮಾತೆ ಮರಿಯಳನ್ನು ಕಾಣೋಣ – ಬಿಷಪ್ ಪೀಟರ್ ಪಾವ್ಲ್


ಪ್ರತಿಯೊಬ್ಬ ಹೆಣ್ಣು ಮಗಳಲ್ಲಿ ಮಾತೆ ಮರಿಯಳನ್ನು ಕಾಣೋಣ ಎಂದು ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾರವರು ಮೇರಿ ಮಾತೆಯ ವಾರ್ಷಿಕ ಹಬ್ಬ ಮೊಂತಿ ಹಬ್ಬದ ಸಂದರ್ಭದಲ್ಲಿ ಕರೆ ನೀಡಿದರು.
ಓರ್ವ ಹೆಣ್ಣು ಮಗಳ ಜನನ ಕುಟುಂಬದಲ್ಲಿ ಹರ್ಷ ಹಾಗೂ ಭರವಸೆ ಮೂಡಿಸುತ್ತದೆ. ದೇವರ ಯೋಜನೆ ಹಾಗೂ ಮನುಕುಲವನ್ನು ಮುನ್ನಡೆಸುವಲ್ಲಿ ಆಕೆಯ ಪಾತ್ರ ಮಹತ್ವದ್ದಾಗಿದೆ. ಸೃಷ್ಟಿಯ ಕಾರ್ಯದಲ್ಲಿ ದೇವರು ಆಕೆಗೆ ವಿಶೇಷ ಸ್ಥಾನ ಕಲ್ಪಿಸಿದ್ದಾರೆ. ಸಂತ ಜೋಕಿಂ ಹಾಗೂ ಸಂತ ಅನ್ನಾ ಅವರ ಏಕೈಕ ಮಗಳಾಗಿ ಜನಿಸಿದ ಮಾತೆ ಮೇರಿ ಮನುಕುಲಕ್ಕೆ ಹೊಸ ನಿರೀಕ್ಷೆ ತಂದಿಟ್ಟರು.
ಇಂದು ನಮ್ಮ ಸಮಾಜದಲ್ಲಿ ಮಹಿಳೆಯ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರ, ಬಲಾತ್ಕಾರ, ಕೊಲೆ ಇತ್ಯಾದಿಗಳನ್ನು ಗಮನಿಸಿದಾಗ ಮಹಿಳೆಯ ಮೂಲಭೂತ ಹಕ್ಕುಗಳು ಅಪಾಯದಲ್ಲಿದ್ದಂತೆ ತೋರುತ್ತವೆ. ಇಂತಹ ಘಟನೆ ಗಮನಿಸಿದಾಗ ನಾಗರಿಕ ಸಮಾಜ ಸ್ತ್ರೀಯರಿಗೆ ಗೌರವ ನೀಡುವಲ್ಲಿ ಸೋತಿದೆ ಎಂದು ಭಾಸವಾಗುತ್ತಿದೆ. ಮಹಿಳೆಗೆ ಮಾಡುತ್ತಿರುವ ದೌರ್ಜನ್ಯ ಮಾತೆ ಮರಿಯಳಿಗೆ ಮಾಡುವ ಅವಮಾನ. ಇದು ದೇವರು ಮೆಚ್ಚುವ ಕಾರ್ಯವಲ್ಲ. ಪ್ರತಿಯೊಬ್ಬ ಮಹಿಳೆಯು ದೇವ ಮಾತೆಯ ಪ್ರತೀಕ. ಅವರಲ್ಲಿ ಮಾತೆಯ ಪ್ರತಿರೂಪ ಕಂಡುಕೊಳ್ಳಲು ಮಾತೆ ಮರಿಯ ಕರೆ ನೀಡುತ್ತಾರೆ. ಮರಿಯಳ ಜನನದ ಹಬ್ಬವು ಪ್ರತಿಯೊಬ್ಬ ಮಹಿಳೆಗೆ ಗೌರವದಿಂದ ಕಾಣಲು ಒಂದು ಸುಸಂದರ್ಭವಾಗಲಿ. ಸರ್ವರಿಗೂ ಮಾತೆ ಮರಿಯಳ ಜನುಮ ದಿನದ ಶುಭಾಶಯಗಳನ್ನು ಸಲ್ಲಿಸಿದರು.

You may also like

News

ದಾಯ್ಜಿವರ್ಲ್ಡ್@25: ಮಾನವೀಯ ಮೌಲ್ಯಗಳ ಮಾಧ್ಯಮ ಕ್ರಾಂತಿ – ಅನಿವಾಸಿ ಉದ್ಯಮಿ ಡಾ. ರೊನಾಲ್ಡ್ ಕೊಲಾಸೊ ಶ್ಲಾಘನೆ

ಮಂಗಳೂರು: “ಕೇವಲ ಸುದ್ದಿ ಪ್ರಸಾರ ಮಾಡುವುದಷ್ಟೇ ಅಲ್ಲದೆ, ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ‘ ದಾಯ್ಜಿವರ್ಲ್ಡ್ ‘ ಮಾಧ್ಯಮ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮಾಡಿದೆ,” ಎಂದು ಅನಿವಾಸಿ ಭಾರತೀಯ
News

ಮಂಗಳೂರಿನಲ್ಲಿ ಸಂತ ಆಂತೋನಿ ಪುಣ್ಯ ಅವಶೇಷಗಳ ಹಬ್ಬದ ಭವ್ಯ ಆಚರಣೆ

ನಮ್ಮ ಮಾತುಗಳು ಇತರರಿಗೆ ನೋವು ನೀಡುವ ಬದಲು ಭರವಸೆ ಮತ್ತು ಸಾಂತ್ವನ ನೀಡುವಂತಿರಲಿ – ನಿವೃತ್ತ ಆರ್ಚ್ ಬಿಷಪ್ ಡಾ| ಬರ್ನಾರ್ಡ್ ಮೊರಾಸ್ ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ

You cannot copy content of this page