August 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೆಪಿಎಸ್ ಸಿ ಗೆ ಮಂಗಳೂರಿನ ವಕೀಲೆ ಎಲ್ಫ್ರೀಡಾ ನೇಮಕ


ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿ ಮಂಗಳೂರಿನ ವಕೀಲೆ ಎಲ್ಫ್ರೀಡಾ ಡಿಸಿಲ್ವಾ ಅವರನ್ನು ನೇಮಕ ಮಾಡಲಾಗಿದೆ. ಇವರು ಮಂಗಳೂರು ಧರ್ಮಕ್ಷೇತ್ರದ ಕಾಸ್ಸಿಯಾ ಚರ್ಚ್ ನ ಸದಸ್ಯೆ ಹಾಗೂ ಮಂಗಳೂರು ವಿಭಾಗದ ಎಸಿಎಫ್ ಕ್ಲಿಫರ್ಡ್ ಲೋಬೊ ಇವರ ಪತ್ನಿಯಾಗಿದ್ದಾರೆ. ಆಯೋಗದಲ್ಲಿ ಅಧಿಕಾರೇತರ ವರ್ಗದಿಂದ ಖಾಲಿ ಇದ್ದ ಹುದ್ದೆಗೆ ಎಲ್ಫ್ರೀಡಾ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. ಆಯೋಗದಲ್ಲಿ ಒಟ್ಟು 16 ಸದಸ್ಯ ಸ್ಥಾನಗಳಿದ್ದು, ಈ ನೇಮಕದಿಂದ ಎಲ್ಲಾ ಸ್ಥಾನಗಳೂ ಭರ್ತಿಯಾದಂತಾಗಿದೆ.

You may also like

News

ಬೈಂದೂರಿನ ಆಶಾ ವೀಣಾ ಡಯಾಸ್‌ ಅವರಿಗೆ ‘ಕರ್ನಾಟಕ ಶೈಕ್ಷಣಿಕ ಪ್ರಶಸ್ತಿ’ ಗೌರವ

ಶಿಕ್ಷಣ, ನಿರೂಪಣೆ, ಸಹಪಠ್ಯ ಚಟುವಟಿಕೆ ಹಾಗೂ ಸಾಮಾಜಿಕ ಸೇವೆಗೆ ಸಂದ ಪ್ರತಿಷ್ಠಿತ ಮನ್ನಣೆ “ಸಾಧಿಸುವ ಛಲವಿದ್ದರೆ ಅಸಾಧ್ಯವೂ ಸಾಧ್ಯ” ಎಂಬ ಮಾತಿಗೆ ಮತ್ತೊಮ್ಮೆ ಅರ್ಥ ತುಂಬುವಂತೆ, ಉಡುಪಿ
News

ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು, ಭಯ ಮೂಡಿಸುವ ಸಂದೇಶ – ಫೇಸ್‌ಬುಕ್ ಖಾತೆದಾರನ ವಿರುದ್ಧ ಪ್ರಕರಣ

ಪುತ್ತೂರು ದರ್ಭೆ ಪ್ರದೇಶದಲ್ಲಿ ಆಗಸ್ಟ್ 21ರಂದು ಶುಕ್ರವಾರ ಅಂಗಡಿಯೊಂದರಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಹಾಗೂ ಸಾರ್ವಜನಿಕರಲ್ಲಿ ಭಯ ಉಂಟುಮಾಡುವ ರೀತಿಯಲ್ಲಿ ಸಂದೇಶ

You cannot copy content of this page