January 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗಣೇಶೋತ್ಸವ ಶೋಭಾಯಾತ್ರೆಯಲ್ಲಿ ಭಾಗವಹಿಸಿದ ಭಕ್ತಾದಿಗಳಿಗೆ ಮುಸ್ಲಿಂ ಐಕ್ಯ ವೇದಿಕೆಯ ವತಿಯಿಂದ ಐಸ್ ಕ್ರೀಮ್ ಹಾಗೂ ನೀರು ವಿತರಣೆ

 

ಬಂಟ್ವಾಳ ತಾಲೂಕಿನ ಅನಂತಾಡಿ ಕರಿಂಕದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ನಡೆದ ಶ್ರೀ ಗಣೇಶನ ಶೋಭಾಯಾತ್ರೆಯಲ್ಲಿ ಭಾಗವಹಿಸಿದ ಭಕ್ತಾದಿಗಳಿಗೆ ಮಾಣಿ ಸಮೀಪದ ಕೊಡಾಜೆಯ ಮುಸ್ಲಿಂ ಐಕ್ಯ ವೇದಿಕೆಯ ವತಿಯಿಂದ ಐಸ್ ಕ್ರೀಮ್ ಹಾಗೂ ನೀರು ವಿತರಿಸಿ ಸೌಹಾರ್ದತೆ ಮೆರೆದಿದ್ದಾರೆ.

ಭಾನುವಾರ ‌ಸಂಜೆ ಶ್ರೀ ಗಣೇಶನ ಶೋಭಾಯಾತ್ರೆಯು ಕರಿಂಕದಿಂದ ಕೊಡಾಜೆಗೆ ಆಗಮಿಸಿ ನೇರಳಕಟ್ಟೆ ತನಕ ಸಾಗಿ ಅಲ್ಲಿಂದ ಪುನಃ ಅನಂತಾಡಿ ತೆರಳಿತು. ಈ ಮಧ್ಯೆ ಕೊಡಾಜೆಗೆ ಆಗಮಿಸಿದ ವೇಳೆ ಭಕ್ತಾದಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡ ಕೊಡಾಜೆ ಮುಸ್ಲಿಂ ಐಕ್ಯ ವೇದಿಕೆಯ ಸದಸ್ಯರು ಸೌಹಾರ್ದತೆಯ ಸಂಕೇತವಾಗಿ ಐಸ್ ಕ್ರೀಮ್ ಹಾಗೂ ಪಾನೀಯ ವಿತರಿಸಿದರು. ಈ ಸಂದರ್ಭದಲ್ಲಿ ಚಲನಚಿತ್ರ ನಟರಾದ ಚೇತನ್ ರೈ ಮಾಣಿ, ಚಂದ್ರಹಾಸ ಶೆಟ್ಟಿ, ಪ್ರಮುಖರಾದ ಸುದೀಪ್ ಕುಮಾರ್ ಶೆಟ್ಟಿ, ಸನತ್ ಕುಮಾರ್ ರೈ, ಬಾಲಕೃಷ್ಣ ಆಳ್ವ ಕೊಡಾಜೆ, ನಾರಾಯಣ ಸಾಲಿಯಾನ್, ಜಯಂತಿ ವಿ. ಪೂಜಾರಿ, ಲತೀಫ್ ನೇರಳಕಟ್ಟೆ, ಇರ್ಷಾದ್ ಪಂತಡ್ಕ ಮಾತನಾಡಿ ಇಲ್ಲಿನ ಶಾಂತಿ ಸೌಹಾರ್ದತೆಯ ಮಾದರಿ ದೇಶದೆಲ್ಲೆಡೆ ಪಸರಿಸಲಿ ಎಂದು ಶುಭ ಹಾರೈಸಿದರು.

ಪರಿಸರದ ಹಿಂದು – ಮುಸ್ಲಿಂ ಸಮುದಾಯದ ಬಾಂದವರು, ಕೊಡಾಜೆ ಮುಸ್ಲಿಂ ಐಕ್ಯ ವೇದಿಕೆಯ ಸದಸ್ಯರು ಭಾಗವಹಿಸಿದ್ದರು. ಮುಖಂಡರಾದ ಫಾರೂಕ್ ಗೋಳಿ ಕಟ್ಟೆ, ರಿಯಾಜ್ ನೇರಳಕಟ್ಟೆ, ಸಲೀಂ ಮಾಣಿ, ರಫೀಕ್ ಯಸ್., ಅಶ್ರಫ್ ಭಾರತ್ ವೇಹಿಕಲ್, ರಝಾಕ್ ಕರಾವಳಿ ಶರೀಫ್ ಗೋವ, ಮನ್ಸೂರ್ ರಫೀಕ್ ಪಂತಡ್ಕ, ಆದಮ್ SMS ನೌಫಲ್ ಕೊಡಾಜೆ, ಫಾರೂಕ್ ಆಟೋ ಮತ್ತಿತರರು ಉಪಸ್ಥಿತರಿದ್ದರು.

 

You may also like

News

ಮಂಗಳೂರಿನಲ್ಲಿ 9ನೇ ಅಂತರ್‌ರಾಷ್ಟ್ರೀಯ ಗಾಳಿಪಟ ಉತ್ಸವ – ಜನವರಿ 17–18 ರಂದು ಬ್ಲೂ ಬೇ ಬೀಚ್‌ನಲ್ಲಿ ವೈಭವ

ಕರಾವಳಿ ಉತ್ಸವದ ಅಂಗವಾಗಿ ದೇಶದ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ‘ಟೀಮ್ ಮಂಗಳೂರು’ ಹವ್ಯಾಸಿ ಗಾಳಿಪಟ ತಂಡವು ಮಂಗಳೂರಿನ ತಣ್ಣೀರುಬಾವಿಯ ನವೀಕರಣಗೊಂಡ ಬ್ಲೂ ಬೇ ಬೀಚ್‌ನಲ್ಲಿ 9ನೇ ಅಂತರ್‌ರಾಷ್ಟ್ರೀಯ
News

ಧರ್ಮ ಕೇಳಿ ಅವಾಚ್ಯ ನಿಂದನೆ ಹಾಗೂ ಹಲ್ಲೆ – ಕೊಲೆಯತ್ನ ಪ್ರಕರಣದಲ್ಲಿ ಕಾವೂರು ಠಾಣಾ ಪೊಲೀಸರಿಂದ ಮೂವರ ಬಂಧನ

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಧರ್ಮ ವಿಚಾರಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

You cannot copy content of this page