December 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲದ ಹೊರೈಝನ್ ಶಾಲೆಯಲ್ಲಿ ಮಿಲಾದ್ ಫೆಸ್ಟ್ ಬ್ರೀಝೇ ಮದೀನಾ.

 

ವಿಟ್ಲದಲ್ಲಿರುವ ಹೊರೈಝನ್ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳ ಮಿಲಾದ್ ಫೆಸ್ಟ್ ಬ್ರೀಝೇ ಮದೀನಾ ” ಕಾರ್ಯಕ್ರಮವು ಶಾಲೆಯ ಅಧ್ಯಕ್ಷ ಅಝೀಝ್ ಸನ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿಟ್ಲ ಕೇಂದ್ರ ಜುಮಾ ಮಸೀದಿಯ ಖತೀಬ್ ದಾವೂದ್ ಹನೀಫಿ ದುವಾದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮಸೀದಿ ಅಧ್ಯಕ್ಷ ಅಶ್ರಫ್ ಮಹಮ್ಮದ್ ಪೊನ್ನೋಟು, ಶಾಲಾ ಉಪಾಧ್ಯಕ್ಷ ವಿ.ಕೆ.ಎಂ. ಅಶ್ರಫ್, ಸಲಹೆಗಾರ ವಿ.ಎಚ್. ಅಶ್ರಫ್, ಕೋಶಾಧಿಕಾರಿ ಅಂದುಞಿ ಗಮಿ, ಕಾರ್ಯದರ್ಶಿ ನೋಟರಿ ಅಬೂಬಕರ್, ಜೊತೆ ಕಾರ್ಯದರ್ಶಿ ಇಕ್ಬಾಲ್ ಹಳೆಮನೆ, ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು, ಮಸೀದಿಯ ಕೋಶಾಧಿಕಾರಿ ಶರೀಫ್ ಪೊನ್ನೋಟು, ಕಾರ್ಯದರ್ಶಿ ಇಸ್ಮಾಯಿಲ್ ಶಾಫಿ, ಜೊತೆ ಕಾರ್ಯದರ್ಶಿ ಅಬೂಬಕರ್ ಅನಿಲಕಟ್ಟೆ, ಟ್ರಸ್ಟಿಗಳಾದ ಶೀತಲ್ ಇಕ್ಬಾಲ್, ಅಬ್ದುಲ್ ಹಮೀದ್ ಬದ್ರಿಯಾ, ಇಸಾಕ್ ಸಾಹೇಬ್ ವೇದಿಕೆಯಲ್ಲಿದ್ದರು.

ಈ ಸಂದರ್ಭ ವಿದ್ಯಾರ್ಥಿಗಳಿಂದ ವಿವಿಧ ಸ್ಪರ್ಧೆಗಳು, ಪ್ರವಾದಿ ಪ್ರೇಮದ ಹಾಡು, ಭಾಷಣಗಳು ಹಾಗೂ ವಿವಿಧ ಕಾರ್ಯಕ್ರಮಗಳು ನಡೆದುವು. ಸದರ್ ಉಮ್ಮರ್ ಸ‌ಅದಿ ಸ್ವಾಗತಿಸಿ, ಇಸ್ಮಾಯಿಲ್ ಹನೀಫಿ ವಂದಿಸಿದರು.  ಸ್ವಾದಿಕ್ ಸಖಾಫಿ ನಿರೂಪಿಸಿದರು.

You may also like

News

ಮಂಗಳೂರಿನ ಆಯುಷ್ ಇಲಾಖೆಯ ಅವಧಿ ಮೀರಿದ ಔಷಧ ಅಕ್ರಮ—ಸರ್ಕಾರದ ನಿರ್ಲಕ್ಷ್ಯಕ್ಕೆ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ

ಮಂಗಳೂರಿನ ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧಿಗಳನ್ನು ಪೂರೈಕೆ ಮಾಡಿ ರೋಗಿಗಳ ಜೀವದೊಂದಿಗೆ ಆಟವಾಡಿದ ಗಂಭೀರ ಅಕ್ರಮದ ಕುರಿತಾಗಿ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಶಾಸಕ ವೇದವ್ಯಾಸ ಕಾಮತ್
News

ಪುತ್ತೂರಿಗೆ ಶಾಸಕ ಅಶೋಕ್ ರೈ ಕನಸು ನನಸಾದಂತೆ — ರೂಪಾಯಿ 5 ಕೋಟಿ ವೆಚ್ಚದ ಹೊಸ ತಾಲೂಕು ಪಂಚಾಯತ್ ಕಟ್ಟಡಕ್ಕೆ ನಾಳೆ ಡಿಸೆಂಬರ್ 13ರಂದು ಶಿಲಾನ್ಯಾಸ

ಪುತ್ತೂರಿನ ಅಭಿವೃದ್ಧಿ ಕನಸುಗಳು ಒಂದೊಂದಾಗಿ ಸಫಲವಾಗುತ್ತಿವೆ. ಹಳೆಯ ಮತ್ತು ಅಪರಿಹಾರ್ಯವಾಗಿರುವ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಹೊಸ ಕಟ್ಟಡದ ಅಗತ್ಯವನ್ನು ಆಗಲೇ ಗುರುತಿಸಿದ್ದ ಶಾಸಕರಾದ

You cannot copy content of this page