March 26, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಡಿಪ್ಲೊಮಾ ಆದವರಿಗೆ ಎಂಆರ್‌ಪಿಎಲ್‌ನಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ


ಭಾರತದ ಪ್ರಮುಖ ತೈಲ ಕಂಪೆನಿಯಾದ ಒಎನ್​ಜಿಸಿ ಅಂಗಸಂಸ್ಥೆ ಮಂಗಳೂರು ರಿಫೈನರಿ ಪೆಟ್ರೋಕೆಮಿಕಲ್ಸ್​ ಲಿಮಿಟೆಡ್​ (ಎಂಆರ್​ಪಿಎಲ್​)ನಲ್ಲಿ ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಡಿಪ್ಲೊಮಾ ಹಾಗೂ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪದವೀಧರ ಅಪ್ರೆಂಟಿಸ್​ ಟ್ರೈನಿ ಮತ್ತು ಟೆಕ್ನಿಶಿಯನ್​​ ಅಪ್ರೆಂಟಿಸ್​ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವೀಧರ ಅಪ್ರೆಂಟಿಸ್​ ಟ್ರೈನಿ – ಕೆಮಿಕಲ್​, ಸಿವಿಲ್​, ಮೆಕ್ಯಾನಿಕಲ್​ ಮತ್ತು ಇಲೆಕ್ಟ್ರಾನಿಕ್ಸ್​ ಆ್ಯಂಡ್​ ಕಮ್ಯೂನಿಕೇಷನ್​ನಲ್ಲಿ ಇಂಜಿನಿಯರಿಂಗ್​ ಪದವಿ ಪಡೆದವರು. ಪದವಿ ಅಥವಾ ಡಿಪ್ಲೊಮಾವನ್ನು 2020 ಮತ್ತು 2024ರೊಳಗೆ ಪೂರೈಸಿದ ಅಭ್ಯರ್ಥಿಗಳು ಅಪ್ರೆಂಟಿಸ್​ ಟ್ರೈನಿ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು. ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಎನ್​ಎಟಿಎಸ್​​ ಜಾಲತಾಣ nats.education.gov.in ಇಲ್ಲಿ ಮೊದಲು ಕಡ್ಡಾಯವಾಗಿ ನೋಂದಣಿ ಮಾಡಿಸಿರಬೇಕು. ಈ ನೋಂದಣಿ ದಾಖಲಾತಿ ಅರ್ಜಿ ಜೊತೆಗೆ ಅಗತ್ಯ ವಿದ್ಯಾರ್ಹತೆ ಮತ್ತು ಇತರೆ ಅಗತ್ಯ ದಾಖಲೆ ಮತ್ತು ಆಧಾರ್​​, ಫೋಟೋಕಾಪಿಗಳನ್ನು ಹೊಂದಿಸಿರಬೇತು. ಈ ಸಂಸ್ಥೆಯಲ್ಲಿ ಟ್ರೈನಿ ಕೋರ್ಸ್​ ನಡೆಸುವ ಇಚ್ಛಿಸುವ ಅಭ್ಯರ್ಥಿಗಳು ಕೆಳಗಿನ ಸ್ಥಳದಲ್ಲಿ ನಡೆಯುವ ಅಪ್ರೆಂಟಿಸ್​ ಮೇಳದಲ್ಲಿ ನೇರವಾಗಿ ಭಾಗಿಯಾಗಬಹುದು.


ಬಾಪೂಜಿ ಪಾಲಿಟೆಕ್ನಿಕ್​, ಬಿಐಇಟಿ ರೋಡ್​, ಶಬನೂರ್​, ದಾವಣಗೆರೆ, ಕರ್ನಾಟಕ – 577004.‌ ಇಲ್ಲಿಗೆ ಅರ್ಜಿ ಸಲ್ಲಿಸಬೇಕು. ಸೆಪ್ಟೆಂಬರ್‌ 12ರಂದು ವಾಕ್​ ಇನ್​ ನಡೆಯಲಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ mrpl.co.in ಇಲ್ಲಿಗೆ ಭೇಟಿ ನೀಡಬೇಕು.

You may also like

News

ದಲಿತ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಕೆ ಡಿಎಚ್ಎಸ್ ಒತ್ತಾಯ – ಕಠಿಣ ಕ್ರಮಕ್ಕೆ ಆಗ್ರಹ

ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬವನು ನಿರಂತರ ಲೈಂಗಿಕ ಕಿರುಕುಳ ನೀಡುವ ಮೂಲಕ ಮಾನಸಿಕ
News

ನೇತ್ರದಾನದಿಂದ ಇನ್ನೊಬ್ಬರ ಬಾಳಿಗೆ ಬೆಳಕು – ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ

ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು. ದಕ್ಷಿಣ ಕನ್ನಡ

You cannot copy content of this page