January 19, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಬ್ದುಲ್ ಬಾಷಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ


ತನ್ವೀರುಲ್ ಇಸ್ಲಾಂ ಮದ್ರಸ ವಿದ್ಯಾರ್ಥಿ ಹಾಗೂ ಉಪ್ಪಿನಂಗಡಿ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಅಬ್ದುಲ್ ಬಾಷಿತ್ ರಚಿಸಿದ “ಸೀವಿಂಗ್ ಚಯರ್ ಫಾರ್ ಹ್ಯಾಂಡಿಕ್ಯಾಪ್ಸ್” ಎಂಬ ವಿಜ್ಞಾನ ಮಾದರಿ ಕೇಂದ್ರ ಸರಕಾರದ ವಿಜ್ಞಾನ – ತಂತ್ರಜ್ಞಾನ ಸಚಿವಾಲಯದ ನಡೆಸುವ ಇನ್ ಸ್ಪಾಯರ್ ಅವಾರ್ಡ್ ಮಾನಕ್ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದಕ್ಕೆ ಆಯ್ಕೆಯಾಗಿದ್ದಾರೆ. ಇದೇ ಸೆಪ್ಟೆಂಬರ್ 14 ರಿಂದ 20ರವರೆಗೆ ದೆಹಲಿಯ ಕ್ಯಾಂಪಸ್ ನಲ್ಲಿ ನಡೆಯುವ ಸ್ಪರ್ಧೆಯಲ್ಲಿ ಅಬ್ದುಲ್ ಬಾತಿಷ್ ಮಾದರಿಯನ್ನು ಪ್ರದರ್ಶಿಸಲಿದ್ದಾನೆ. ಬಾಷಿತ್ ನಿಗೆ SKSBV ತನ್ವೀರುಲ್ ಇಸ್ಲಾಂ ಮದ್ರಸ ವತಿಯಿಂದ ಸನ್ಮಾನಿಸಲಾಯಿತು. ಬಾಷಿತ್ ರವರು ಬೆಳ್ತಂಗಡಿ ತಾಲೂಕಿನ ಉಪ್ಪಿನಂಗಡಿ ಸಮೀಪದ ಕಡವಿನಬಾಗಿಲು ಇಲ್ಯಾಸ್ ಪಾಷ ಹಾಗೂ ಸಬಿಯರವರ ಮಗ.

You may also like

News

ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಎಸ್. ನಂಜುಂಡಯ್ಯ ಚಾಮರಾಜನಗರ ಆಯ್ಕೆ

ಕಾಸರಗೋಡು : ಸಂಘಟಕ, ಸಾಹಿತಿ ಶಿಕ್ಷಕ, ಸಾಹಿತ್ಯ ಪರಿಷತ್, ಜಾನಪದ ಪರಿಷತ್ ಮೊದಲಾಗಿ ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಹೆಚ್ಚಿನ ಸಂಘ, ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಎಸ್.
News

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ

You cannot copy content of this page