May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಸೈಗೋಳಿ ಕ್ಸೇವಿಯರ್ ಐಟಿಐ ಇದರ ನೂತನ ಅಧ್ಯಕ್ಷರಾಗಿ ಆಲ್ವಿನ್ ಡಿಸೋಜ ಪಾನೀರ್ ಆಯ್ಕೆ.

ಅಸೈಗೋಳಿಯಲ್ಲಿರುವ ಕ್ಸೇವಿಯರ್ ಎಜ್ಯುಕೇಶನ್ ಟ್ರಸ್ಟ್ (ರಿ.) ಇವರು ನಡೆಸುತ್ತಿರುವ ಕ್ಸೇವಿಯರ್ ಐಟಿಐ ಇದರ ನೂತನ ಅಧ್ಯಕ್ಷರಾಗಿ ಆಲ್ವಿನ್ ಡಿಸೋಜ ಪಾನೀರ್ ಆಯ್ಕೆಯಾಗಿರುತ್ತಾರೆ. ಈ ಟ್ರಸ್ಟ್ 1984ರಲ್ಲಿ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗದ ಹಿಂದುಳಿದ ಮತ್ತು ಗ್ರಾಮಿಣ ಯುವಕರಿಗೆ ತಾಂತ್ರಿಕ ತರಬೇತಿ ನೀಡುವ ಉದ್ದೇಶದಿಂದ ಜಾತಿ, ಮತ ಮತ್ತು ಧರ್ಮ ಲೆಕ್ಕಿಸದೆ ಸಮಾಜದ ಉದ್ಧಾರಕ್ಕಾಗಿ  ಸ್ಥಾಪನೆಗೊಂಡಿತು.

ಕ್ಸೇವಿಯರ್ ಟ್ರಸ್ಟ್ ವತಿಯಿಂದ 1984ರಲ್ಲಿ ಮುಕ್ಕದಲ್ಲಿ ಕ್ಸೇವಿಯರ್ ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್ (XITC) ಎಂದು ಸ್ಥಾಪನೆಗೊಂಡು, ತದನಂತರ 1992ರಲ್ಲಿ ಮುಕ್ಕದಿಂದ ಕೊಣಾಜೆ ಸಮೀಪದ ಅಸೈಗೋಳಿಗೆ ಸ್ಥಳಾಂತರಿಸಲಾಯಿತು. ಉದ್ಯೋಗ ಮತ್ತು ತರಬೇತಿ ಇಲಾಖೆ ಕರ್ನಾಟಕ ರಾಜ್ಯ ಸರ್ಕಾರ ಮತ್ತು ನ್ಯಾಷನಲ್ ಕೌನ್ಸಿಲ್ ಫಾರ್ ವೊಕೇಶನಲ್ ಟ್ರೈನಿಂಗ್ NCVT ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಭಾರತ ಸರ್ಕಾರ ನವ ದೆಹಲಿಯಿಂದ ಗುರುತಿಸಲ್ಪಟ್ಟಿದ್ದ ಈ ಸಂಸ್ಥೆಗೆ 40 ವರ್ಷ ತುಂಬುವ ಈ ಶುಭ ಸಂದರ್ಭದಲ್ಲಿ 2024 ಸಪ್ಟಂಬರ್ 9ರಂದು ನಡೆದ ಸಭೆಯಲ್ಲಿ ಆಲ್ವಿನ್ ಡಿಸೋಜ ಪಾನೀರ್ ಇವರನ್ನು ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ನೇಮಿಸಲಾಯಿತು.

ಆಲ್ವಿನ್ ಡಿಸೋಜ ಪಾನೀರ್ ಇವರು All India Christian union ಇದರ ರಾಜ್ಯಧ್ಯಕ್ಷ, ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಅಧ್ಯಕ್ಷ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮೈನೋರಿಟಿಯ ಅಧ್ಯಕ್ಷರಾಗಿ ಸಾಮಾಜಿಕ ರಾಜಕೀಯ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನೆ ತಾನು ತೊಡಗಿಸಿಕೊಂಡು ಬಂದಿದ್ದಾರೆ.

You may also like

News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC
News

ICYM BORIMAR ಸಂಘಟನೆಯಲ್ಲಿ ‘ಕುಟುಂಬ ರಾಜಕಾರಣ’?: ಯಾರಿಗೂ ತಿಳಿಸದೇ ಒಳಗಿಂದೊಳಗೆ ಚುನಾವಣೆ ನಡೆಸಿದ ಸಚೇತಕ! ಭುಗಿಲೆದ್ದ ಆಕ್ರೋಶ

ಮಂಗಳೂರು ಧರ್ಮಾಧ್ಯಕ್ಷರಿಗೆ ಲಿಖಿತ ದೂರು ನೀಡಿದ ಚರ್ಚ್ ಹಿಂದಿನ ಪಾಲನಾ ಸಮಿತಿ ಕ್ರೈಸ್ತ ಯುವಜನರ ಪ್ರತಿಷ್ಠಿತ ಸಂಘಟನೆಯಾದ ICYM ಬೊರಿಮಾರ್ (BORIMAR) ಘಟಕದಲ್ಲಿ ಸಚೇತಕನು (ANIMATOR) ಧರ್ಮಕ್ಷೇತ್ರದ

You cannot copy content of this page