August 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಸೈಗೋಳಿ ಕ್ಸೇವಿಯರ್ ಐಟಿಐ ಇದರ ನೂತನ ಅಧ್ಯಕ್ಷರಾಗಿ ಆಲ್ವಿನ್ ಡಿಸೋಜ ಪಾನೀರ್ ಆಯ್ಕೆ.

ಅಸೈಗೋಳಿಯಲ್ಲಿರುವ ಕ್ಸೇವಿಯರ್ ಎಜ್ಯುಕೇಶನ್ ಟ್ರಸ್ಟ್ (ರಿ.) ಇವರು ನಡೆಸುತ್ತಿರುವ ಕ್ಸೇವಿಯರ್ ಐಟಿಐ ಇದರ ನೂತನ ಅಧ್ಯಕ್ಷರಾಗಿ ಆಲ್ವಿನ್ ಡಿಸೋಜ ಪಾನೀರ್ ಆಯ್ಕೆಯಾಗಿರುತ್ತಾರೆ. ಈ ಟ್ರಸ್ಟ್ 1984ರಲ್ಲಿ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗದ ಹಿಂದುಳಿದ ಮತ್ತು ಗ್ರಾಮಿಣ ಯುವಕರಿಗೆ ತಾಂತ್ರಿಕ ತರಬೇತಿ ನೀಡುವ ಉದ್ದೇಶದಿಂದ ಜಾತಿ, ಮತ ಮತ್ತು ಧರ್ಮ ಲೆಕ್ಕಿಸದೆ ಸಮಾಜದ ಉದ್ಧಾರಕ್ಕಾಗಿ  ಸ್ಥಾಪನೆಗೊಂಡಿತು.

ಕ್ಸೇವಿಯರ್ ಟ್ರಸ್ಟ್ ವತಿಯಿಂದ 1984ರಲ್ಲಿ ಮುಕ್ಕದಲ್ಲಿ ಕ್ಸೇವಿಯರ್ ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್ (XITC) ಎಂದು ಸ್ಥಾಪನೆಗೊಂಡು, ತದನಂತರ 1992ರಲ್ಲಿ ಮುಕ್ಕದಿಂದ ಕೊಣಾಜೆ ಸಮೀಪದ ಅಸೈಗೋಳಿಗೆ ಸ್ಥಳಾಂತರಿಸಲಾಯಿತು. ಉದ್ಯೋಗ ಮತ್ತು ತರಬೇತಿ ಇಲಾಖೆ ಕರ್ನಾಟಕ ರಾಜ್ಯ ಸರ್ಕಾರ ಮತ್ತು ನ್ಯಾಷನಲ್ ಕೌನ್ಸಿಲ್ ಫಾರ್ ವೊಕೇಶನಲ್ ಟ್ರೈನಿಂಗ್ NCVT ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಭಾರತ ಸರ್ಕಾರ ನವ ದೆಹಲಿಯಿಂದ ಗುರುತಿಸಲ್ಪಟ್ಟಿದ್ದ ಈ ಸಂಸ್ಥೆಗೆ 40 ವರ್ಷ ತುಂಬುವ ಈ ಶುಭ ಸಂದರ್ಭದಲ್ಲಿ 2024 ಸಪ್ಟಂಬರ್ 9ರಂದು ನಡೆದ ಸಭೆಯಲ್ಲಿ ಆಲ್ವಿನ್ ಡಿಸೋಜ ಪಾನೀರ್ ಇವರನ್ನು ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ನೇಮಿಸಲಾಯಿತು.

ಆಲ್ವಿನ್ ಡಿಸೋಜ ಪಾನೀರ್ ಇವರು All India Christian union ಇದರ ರಾಜ್ಯಧ್ಯಕ್ಷ, ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಅಧ್ಯಕ್ಷ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮೈನೋರಿಟಿಯ ಅಧ್ಯಕ್ಷರಾಗಿ ಸಾಮಾಜಿಕ ರಾಜಕೀಯ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನೆ ತಾನು ತೊಡಗಿಸಿಕೊಂಡು ಬಂದಿದ್ದಾರೆ.

You may also like

News

ಬೈಂದೂರಿನ ಆಶಾ ವೀಣಾ ಡಯಾಸ್‌ ಅವರಿಗೆ ‘ಕರ್ನಾಟಕ ಶೈಕ್ಷಣಿಕ ಪ್ರಶಸ್ತಿ’ ಗೌರವ

ಶಿಕ್ಷಣ, ನಿರೂಪಣೆ, ಸಹಪಠ್ಯ ಚಟುವಟಿಕೆ ಹಾಗೂ ಸಾಮಾಜಿಕ ಸೇವೆಗೆ ಸಂದ ಪ್ರತಿಷ್ಠಿತ ಮನ್ನಣೆ “ಸಾಧಿಸುವ ಛಲವಿದ್ದರೆ ಅಸಾಧ್ಯವೂ ಸಾಧ್ಯ” ಎಂಬ ಮಾತಿಗೆ ಮತ್ತೊಮ್ಮೆ ಅರ್ಥ ತುಂಬುವಂತೆ, ಉಡುಪಿ
News

ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು, ಭಯ ಮೂಡಿಸುವ ಸಂದೇಶ – ಫೇಸ್‌ಬುಕ್ ಖಾತೆದಾರನ ವಿರುದ್ಧ ಪ್ರಕರಣ

ಪುತ್ತೂರು ದರ್ಭೆ ಪ್ರದೇಶದಲ್ಲಿ ಆಗಸ್ಟ್ 21ರಂದು ಶುಕ್ರವಾರ ಅಂಗಡಿಯೊಂದರಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಹಾಗೂ ಸಾರ್ವಜನಿಕರಲ್ಲಿ ಭಯ ಉಂಟುಮಾಡುವ ರೀತಿಯಲ್ಲಿ ಸಂದೇಶ

You cannot copy content of this page