May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮರಿಯಾಶ್ರಮ್ ತಲಪಾಡಿ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಮರಿಯಶ್ರಮ್ ಘಟಕ, ಸಿ.ಓ.ಡಿ.ಪಿ. (ರಿ.) ಮಂಗಳೂರು, ಪ್ರವರ್ತಿತ ಸಿಂಚನ ಮತ್ತು ಸಾಧನ ಮಹಾಸಂಘ ತಲಪಾಡಿ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಆಭಿವ್ರದ್ದಿ ಕೇಂದ್ರ, ಯೆನಪೋಯ (ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ) ದೇರಳಕಟ್ಟೆ ಇವರ ಜಂಟಿ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ ಮರಿಯಾಶ್ರಮ್ ತಲಪಾಡಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಮರಿಯಶ್ರಮ್ ಚರ್ಚ್‌ನ ಧರ್ಮಗುರುಗಳಾದ ವಂದನೀಯ ಫಾದರ್ ಗ್ರೆಗರಿ ಪಿರೇರಾರವರು ದೀಪ ಬೆಳಗಿಸುವ ಮೂಲಕ ಉದ್ಗಾಟಿಸಿದರು.

ಕಾರ್ಯಕ್ರಮದಲ್ಲಿ ಯೆನಪೋಯ ಆಸ್ಪತ್ರೆ ವೈದ್ಯರಾದ ಡಾ. ಫಾತಿಮಾ, ಡಾ. ಸಿರಾಜ್, ಕಥೊಲಿಕ್ ಸಭಾ ಕಾಸರಗೋಡ್ ವಲಯ ಹಾಗೂ ಮರಿಯಶ್ರಮ್ ಘಟಕದ ಅಧ್ಯಕ್ಷ ಫ್ರಾನ್ಸಿಸ್ ಮೊಂತೇರೊ, ಸಿ.ಓ.ಡಿ.ಪಿ. (ರಿ.) ಮಂಗಳೂರು ಇದರ ಸಂಯೋಜಕಿ ಲೀಡಿಯ, ಸಿಂಚನ  ಮಹಾಸಂಘ ಆಧ್ಯಕ್ಷೆ ನಝೀಮ ಮತ್ತು ಸಾಧನ ಮಹಾಸಂಘ ಆಧ್ಯಕ್ಷೆ ಝೀನತ್, ಮರಿಯಶ್ರಮ್ ತಲಪಾಡಿ ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷೆ ಲೀನಾ ಡಿಕೊಸ್ತಾ, ಮರಿಯಾಶ್ರಮ್ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಪಿಂಟೊ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರುಡಾಲ್ಫ್ ಸಾಲ್ಡಾನ್ಹಾ ಸ್ವಾಗತಿಸಿ, ಸೀಮಾ ಮಥಾಯಸ್ ವಂದಿಸಿ, ಸ್ಯಾಂಡ್ರಾ ಡಿಸೋಜ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಸುಮಾರು 150 ಕ್ಕೂ ಅಧಿಕ ಮಂದಿ ಭಾಗವಹಿಸಿದರು.

You may also like

News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC
News

ICYM BORIMAR ಸಂಘಟನೆಯಲ್ಲಿ ‘ಕುಟುಂಬ ರಾಜಕಾರಣ’?: ಯಾರಿಗೂ ತಿಳಿಸದೇ ಒಳಗಿಂದೊಳಗೆ ಚುನಾವಣೆ ನಡೆಸಿದ ಸಚೇತಕ! ಭುಗಿಲೆದ್ದ ಆಕ್ರೋಶ

ಮಂಗಳೂರು ಧರ್ಮಾಧ್ಯಕ್ಷರಿಗೆ ಲಿಖಿತ ದೂರು ನೀಡಿದ ಚರ್ಚ್ ಹಿಂದಿನ ಪಾಲನಾ ಸಮಿತಿ ಕ್ರೈಸ್ತ ಯುವಜನರ ಪ್ರತಿಷ್ಠಿತ ಸಂಘಟನೆಯಾದ ICYM ಬೊರಿಮಾರ್ (BORIMAR) ಘಟಕದಲ್ಲಿ ಸಚೇತಕನು (ANIMATOR) ಧರ್ಮಕ್ಷೇತ್ರದ

You cannot copy content of this page