March 26, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೈಸೂರು ವಿಭಾಗ ಹಾಗೂ ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾಟ 2024-25ರ ಕಪ್ ಬಜ್ಪೆಯ ಸೈಂಟ್ ಜೋಸೆಫ್ ಶಾಲೆಯ ಮಡಿಲಿಗೆ

 

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ (ಆಡಳಿತ) ದಕ್ಷಿಣ ಕನ್ನಡ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು ಉತ್ತರ ವಲಯ ಹಾಗೂ ಸಂತ ಜೋಸೆಫರ ಪದವಿಪೂರ್ವ ಕಾಲೇಜು ಬಜಪೆ ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗ ಹಾಗೂ ರಾಜ್ಯಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಫುಟ್ಬಾಲ್ ಪಂದ್ಯಾವಳಿ 2024-25 ದಿನಾಂಕ ಸಪ್ಟಂಬರ್ 12ರಿಂದ 15ರ ತನಕ ಬಜ್ಪೆಯ ಸಂತ ಜೋಸೆಫರ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.

ಕಳೆದ 12 ವರ್ಷಗಳಲ್ಲಿ ಸೈಂಟ್ ಜೋಸೆಫ್ ಹೈಸ್ಕೂಲ್ ಬಾಲಕಿಯರು ಕರ್ನಾಟಕ ರಾಜ್ಯ ಮಟ್ಟದ ಪಂದ್ಯಗಳಲ್ಲಿ 7 ಬಾರಿ ಗೆದ್ದು ರಾಷ್ಟ್ರೀಯ ಫುಟ್ಬಾಲ್ ಪಂದ್ಯಗಳಿಗೆ ಅರ್ಹತೆ ಪಡೆದಿದ್ದಾರೆ. ಕಳೆದ 11 ವರ್ಷಗಳಿಂದ ಸೈಂಟ್ ಜೋಸೆಫ್ ಪ್ರೌಢಶಾಲೆ ಬಜ್ಪೆ ಬಾಲಕಿಯರು ಅವಿರತವಾಗಿ ಇಂಡಿಪೆಂಡೆನ್ಸ್ ಕಪ್ ಗೆದ್ದಿದ್ದಾರೆ.

ವಿಜೇತರಾದ ಎಲ್ಲಾ ಮಕ್ಕಳಿಗೆ ಬಜ್ಪೆ ಶಾಲೆಯ ಸಂಚಾಲಕರಾದ ವಂದನೀಯ ಡಾಕ್ಟರ್ ರೊನಾಲ್ಡ್ ಕುಟಿನ್ಹೊ, ಶಾಲಾ ಶಿಕ್ಷಕ ವೃಂದ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸ್ಟ್ಯಾನಿ ಡಿಸೋಜ, ಕಾರ್ಯದರ್ಶಿ ಗ್ರೇಸಿ ಸಿಕ್ವೇರಾ, ಆಯೋಗಗಳ ಸಂಯೋಜಕಿ ಮೇಬಲ್ ಸಲ್ಡಾನ್ಹಾ, ಬಜ್ಪೆ ಚರ್ಚ್ ನ ಸಮಸ್ತ ಕ್ರೈಸ್ತ ಬಾಂಧವರು ಹಾಗೂ ಮಕ್ಕಳ ಪೋಷಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

You may also like

News

ದಲಿತ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಕೆ ಡಿಎಚ್ಎಸ್ ಒತ್ತಾಯ – ಕಠಿಣ ಕ್ರಮಕ್ಕೆ ಆಗ್ರಹ

ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬವನು ನಿರಂತರ ಲೈಂಗಿಕ ಕಿರುಕುಳ ನೀಡುವ ಮೂಲಕ ಮಾನಸಿಕ
News

ನೇತ್ರದಾನದಿಂದ ಇನ್ನೊಬ್ಬರ ಬಾಳಿಗೆ ಬೆಳಕು – ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ

ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು. ದಕ್ಷಿಣ ಕನ್ನಡ

You cannot copy content of this page