May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶರಣ್ ಪಂಪ್ವೆಲ್, ಭರತ್ ಕುಮ್ಡೆಲು ಹಾಗೂ ಯಶೋಧರ ಕರ್ಬೆಟ್ಟು ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಕೇಸು ದಾಖಲು

ಬಂಟ್ವಾಳ:  ಧರ್ಮನಿಂದನೆ, ಕೋಮು ಪ್ರಚೋಧನಾಕಾರಿ ಹೇಳಿಕೆಯನ್ನು ನೀಡಿ ಶಾಂತಿ ಮತ್ತು ನೆಮ್ಮದಿಯನ್ನು ಕದಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೆಲ್ ಅವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಸಪ್ಟಂಬರ್ 16ರಂದು ಬಿ.ಸಿ. ರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಭಜರಂಗದಳ- ವಿ.ಎಚ್.ಪಿ.ಯವರ ಬಿ‌.ಸಿ. ರೋಡ್ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶರಣ್ ಪಂಪ್ವೆಲ್ ಹಾಗೂ ಭರತ್ ಕುಮ್ಡೆಲು ಅವರು ಮುಸ್ಲಿಂ ಸಮುದಾಯದ ಭಾವನೆಗೆ ಮತ್ತು ಧರ್ಮದ ಘನತೆಗೆ ಧಕ್ಕೆ ಉಂಟಾಗುವಂತೆ ಮತ್ತು ಪ್ರಚೋದನಾಕಾರಿ ಭಾಷಣದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗುವ ರೀತಿಯಲ್ಲಿ ಮಾತನಾಡಿ, ಹಿಂದೂ ಮತ್ತು ಮುಸ್ಲಿಂ ಸಮುದಾಯದ ನಡುವೆ ದ್ವೇಷ ಸಂಘರ್ಷ ಉಂಟಾಗುವ ರೀತಿಯಲ್ಲಿ ಮಾತನಾಡಿದ್ದಲ್ಲದೆ, ವಿಡಿಯೋವನ್ನು ಸಾಮಾಜಿಕ ‌ಜಾಲತಾಣದಲ್ಲಿ ಹರಿಯಬಿಟ್ಟಿದ್ದು ಈ ಬಗ್ಗೆ ಬಿ. ಮೂಡ ಗ್ರಾಮದ ಬಂಟ್ವಾಳ ಕೆಳಗಿನ ಪೇಟೆ ನಿವಾಸಿ ಮಹಮ್ಮದ್ ರಫೀಕ್ ಎಂಬವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಯಶೋಧರ ಕರ್ಬೆಟ್ಟು ವಿರುದ್ಧ ದೂರು.

ಮುಸ್ಲಿಂ ಧರ್ಮವನ್ನು ನಿಂದಿಸಿ ಕೊಲೆ ಬೆದರಿಕೆ ಹಾಕಿದ ಯಶೋಧರ ಕರ್ಬೆಟ್ಟು ಎಂಬಾತನ ಮೇಲೆ ಕಾನೂನು ಕ್ರಮ ಜರಗಿಸುವಂತೆ ಬಂಟ್ವಾಳ ನಿವಾಸಿ ಮಹಮ್ಮದ್ ಸಪ್ನಾಜ್ ನವಾಜ್ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ನೀಡಿದ್ದು ಈತನ ವಿರುದ್ಧವೂ ದೂರು ದಾಖಲಾಗಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

You may also like

News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC
News

ICYM BORIMAR ಸಂಘಟನೆಯಲ್ಲಿ ‘ಕುಟುಂಬ ರಾಜಕಾರಣ’?: ಯಾರಿಗೂ ತಿಳಿಸದೇ ಒಳಗಿಂದೊಳಗೆ ಚುನಾವಣೆ ನಡೆಸಿದ ಸಚೇತಕ! ಭುಗಿಲೆದ್ದ ಆಕ್ರೋಶ

ಮಂಗಳೂರು ಧರ್ಮಾಧ್ಯಕ್ಷರಿಗೆ ಲಿಖಿತ ದೂರು ನೀಡಿದ ಚರ್ಚ್ ಹಿಂದಿನ ಪಾಲನಾ ಸಮಿತಿ ಕ್ರೈಸ್ತ ಯುವಜನರ ಪ್ರತಿಷ್ಠಿತ ಸಂಘಟನೆಯಾದ ICYM ಬೊರಿಮಾರ್ (BORIMAR) ಘಟಕದಲ್ಲಿ ಸಚೇತಕನು (ANIMATOR) ಧರ್ಮಕ್ಷೇತ್ರದ

You cannot copy content of this page