October 16, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿ ಬಾಲವಿಕಾಸ ಶಾಲೆಗೆ ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿಯಲ್ಲಿ ಸಮಗ್ರ ಪ್ರಶಸ್ತಿ

 

ಬಂಟ್ವಾಳ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಹಾಗೂ ಮಾಣಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿಯು ಮಾಣಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆಯು 11 ಪ್ರಥಮ ಹಾಗೂ 2 ದ್ವಿತೀಯ ಬಹುಮಾನಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಧಾರ್ಮಿಕ ಪಠಣ ಸಂಸ್ಕೃತ ಮತ್ತು ಭಾವಗೀತೆ – ಸ್ವಸ್ತಿ (10ನೇ), ಕನ್ನಡ ಭಾಷಣ – ನಿವ್ಯಾ ರೈ (10ನೇ), ಇಂಗ್ಲಿಷ್ ಮತ್ತು ಹಿಂದಿ ಭಾಷಣ – ಪೂರ್ವಿ ಎ. ಭಾರಧ್ವಜ್ (9ನೇ), ಕವನ ವಾಚನ – ದೇವಿಕಾ ಕೆ(9ನೇ), ಘಜಲ್ – ವೈಷ್ಣವಿ (10ನೇ), ರಸಪ್ರಶ್ನೆ – ಆರನ್ ಪೈಸ್ (10ನೇ) ಮತ್ತು ಪುನೀತ್ ಕೆ.ಜಿ. (10ನೇ), ಆಶು ಭಾಷಣ ಮತ್ತು ಚರ್ಚಾ ಸ್ಪರ್ಧೆ‌- ಪ್ರಗತಿ(9ನೇ) ಹಾಗೂ ಕವ್ವಾಲಿ ತಂಡವು ಪ್ರಥಮ ಸ್ಥಾನ ಪಡೆದುಕೊಂಡಿದೆ. ಭರತನಾಟ್ಯದಲ್ಲಿ ಸಂಜನಾ ಎಸ್. ಭಟ್ (9ನೇ) ಹಾಗೂ ಜಾನಪದ ನೃತ್ಯ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಿಜೇತ ವಿದ್ಯಾರ್ಥಿಗಳೆಲ್ಲರೂ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದ ಹಾಗೂ ಶಾಲಾ ಆಡಳಿತ ಮಂಡಳಿ ಶುಭಶಯಗಳನ್ನು ಸಲ್ಲಿಸಿದ್ದಾರೆ.

You may also like

News

ರಾಜ್ಯ ಮಾಹಿತಿ ಆಯೋಗಕ್ಕೆ ಮೂವರು ಹೊಸ ಆಯುಕ್ತರ ನೇಮಕ

ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಡಾ. ಮಹೇಶ್ ವಾಲ್ವೇಕರ್ ಹಾಗೂ ವೆಂಕಟ್ ಸಿಂಗ್ ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಖಾಲಿ ಇದ್ದ ಮೂವರು ಆಯುಕ್ತರ ಹುದ್ದೆಗಳನ್ನು ಅಕ್ಟೋಬರ್
News

ಬಿಕರ್ನಕಟ್ಟೆಯಲ್ಲಿ ವೋಟ್‌ ಚೋರ್‌ ಗದ್ದಿ-ಚೋಡ್‌ ಸಹಿ ಸಂಗ್ರಹ  ಅಭಿಯಾನ – MLC ಐವನ್‌ ಡಿಸೋಜ

ವೋಟ್‌ ಚೋರ್‌ ಗದ್ದಿ-ಚೋಡ್‌ ಈ ಅಭಿಯಾನ ಇಂದು ಅಕ್ಟೋಬರ್ 15ರಂದು ಬುಧವಾರ ಬಿಕರ್ನಕಟ್ಟೆಯಲ್ಲಿ  ನಡೆಸಲಾಯಿತು. ಈ ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದ MLC ಐವನ್‌ ಡಿಸೋಜರವರು ಬಿಜೆಪಿ ಸರಕಾರ

You cannot copy content of this page