July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರ ‘ಪಾಕಿಸ್ತಾನ’ ಹೇಳಿಕೆ – ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ಕೈಗೊತ್ತಿಕೊಂಡ ಸುಪ್ರೀಂಕೋರ್ಟ್

ಹೊಸದಿಲ್ಲಿ: ಕರ್ನಾಟಕ ಹೈಕೋರ್ಟ್ ನ ನ್ಯಾಯಾಧೀಶರು ಪ್ರಕರಣವೊಂದರ ವಿಚಾರಣೆ ವೇಳೆ ಹೇಳಿದ ವಿವಾದಾತ್ಮಕ ಹೇಳಿಕೆಗಳನ್ನು ಒಳಗೊಂಡ ವೀಡಿಯೊ ಕ್ಲಿಪ್ ಗಳನ್ನು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಂಡಿದ್ದು, ಈ ಕುರಿತು ವರದಿಯನ್ನು ನೀಡುವಂತೆ ಕರ್ನಾಟಕ ಹೈಕೋರ್ಟ್ ಗೆ ಆದೇಶ ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ಬಿ.ಆರ್. ಗವಾಯಿ, ಸೂರ್ಯಕಾಂತ್ ಮತ್ತು ಹೃಷಿಕೇಶ್ ರಾಯ್ ಅವರನ್ನೊಳಗೊಂಡ ಐವರು ನ್ಯಾಯಾಧೀಶರ ಪೀಠವು ಇಂದು ಈ ಕುರಿತು ವರದಿ ನೀಡುವಂತೆ ಕರ್ನಾಟಕ ಹೈಕೋರ್ಟ್ ಗೆ ಸೂಚಿಸಿದೆ. ವಿಚಾರಣೆಯೊಂದರ ಸಂದರ್ಭದಲ್ಲಿ, “ಮೈಸೂರು ರಸ್ತೆ ಮೇಲು ಸೇತುವೆಗೆ ಹೋಗಿ ನೋಡಿ, ಪ್ರತಿ ಅಟೋ ರಿಕ್ಷಾದಲ್ಲೂ ಹತ್ತು ಮಂದಿಯಿರುತ್ತಾರೆ. ಇಲ್ಲಿ ಕಾನೂನು ಅನ್ವಯಿಸುವುದಿಲ್ಲ. ಯಾಕೆಂದರೆ, ಮೈಸೂರು ಮೇಲ್ಸೇತುವೆಯು ಗೋರಿಪಾಳ್ಯದಿಂದ ಎಡಕ್ಕೆ ಮಾರುಕಟ್ಟೆಗೆ ತೆರಳುತ್ತದೆ. ಇದು ಪಾಕಿಸ್ತಾನದಲ್ಲಿದೆ, ಬಾರತದಲ್ಲಲ್ಲ. ಇದು ವಾಸ್ತವ. ಅಲ್ಲಿಗೆ ಎಷ್ಟೇ ಕಟ್ಟುನಿಟ್ಟಿನ ಪೊಲೀಸ್ ಅಧಿಕಾರಿಯನ್ನು ನೇಮಕ ಮಾಡಿದರೂ, ಅವರನ್ನು ಥಳಿಸಲಾಗುತ್ತೆ” ಎಂದು ನ್ಯಾಯಮೂರ್ತಿಗಳಾದ ವೇದವ್ಯಾಸಾಚಾರ್ ಶ್ರೀಷಾನಂದ ಸಾಯಿ ಹೇಳಿದ್ದರು.

ನ್ಯಾಯಮೂರ್ತಿಗಳ ಹೇಳಿಕೆ ವ್ಯಾಪಕ ಟೀಕೆಗೆ ಕಾರಣವಗಿತ್ತು. ಈ ಕುರಿತು ಸುಪ್ರೀಂ ಕೋರ್ಟ್ ಗೆ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯವು ಹೈಕೋರ್ಟ್ ನ ರಿಸಿಸ್ಟ್ರಾರ್ ಜನರಲ್ ಗೆ ಸೂಚಿಸಿದೆ. ಈ ಬಗ್ಗೆ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

     

You may also like

News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ
News

Former CSST General Councillor Sr Josephette Passes Away

The Congregation of the Carmelite Sisters of Saint Teresa (CSST) is mourning the passing of Sr Josephette, former General Councillor

You cannot copy content of this page