April 19, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರ ‘ಪಾಕಿಸ್ತಾನ’ ಹೇಳಿಕೆ – ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ಕೈಗೊತ್ತಿಕೊಂಡ ಸುಪ್ರೀಂಕೋರ್ಟ್

ಹೊಸದಿಲ್ಲಿ: ಕರ್ನಾಟಕ ಹೈಕೋರ್ಟ್ ನ ನ್ಯಾಯಾಧೀಶರು ಪ್ರಕರಣವೊಂದರ ವಿಚಾರಣೆ ವೇಳೆ ಹೇಳಿದ ವಿವಾದಾತ್ಮಕ ಹೇಳಿಕೆಗಳನ್ನು ಒಳಗೊಂಡ ವೀಡಿಯೊ ಕ್ಲಿಪ್ ಗಳನ್ನು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಂಡಿದ್ದು, ಈ ಕುರಿತು ವರದಿಯನ್ನು ನೀಡುವಂತೆ ಕರ್ನಾಟಕ ಹೈಕೋರ್ಟ್ ಗೆ ಆದೇಶ ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ಬಿ.ಆರ್. ಗವಾಯಿ, ಸೂರ್ಯಕಾಂತ್ ಮತ್ತು ಹೃಷಿಕೇಶ್ ರಾಯ್ ಅವರನ್ನೊಳಗೊಂಡ ಐವರು ನ್ಯಾಯಾಧೀಶರ ಪೀಠವು ಇಂದು ಈ ಕುರಿತು ವರದಿ ನೀಡುವಂತೆ ಕರ್ನಾಟಕ ಹೈಕೋರ್ಟ್ ಗೆ ಸೂಚಿಸಿದೆ. ವಿಚಾರಣೆಯೊಂದರ ಸಂದರ್ಭದಲ್ಲಿ, “ಮೈಸೂರು ರಸ್ತೆ ಮೇಲು ಸೇತುವೆಗೆ ಹೋಗಿ ನೋಡಿ, ಪ್ರತಿ ಅಟೋ ರಿಕ್ಷಾದಲ್ಲೂ ಹತ್ತು ಮಂದಿಯಿರುತ್ತಾರೆ. ಇಲ್ಲಿ ಕಾನೂನು ಅನ್ವಯಿಸುವುದಿಲ್ಲ. ಯಾಕೆಂದರೆ, ಮೈಸೂರು ಮೇಲ್ಸೇತುವೆಯು ಗೋರಿಪಾಳ್ಯದಿಂದ ಎಡಕ್ಕೆ ಮಾರುಕಟ್ಟೆಗೆ ತೆರಳುತ್ತದೆ. ಇದು ಪಾಕಿಸ್ತಾನದಲ್ಲಿದೆ, ಬಾರತದಲ್ಲಲ್ಲ. ಇದು ವಾಸ್ತವ. ಅಲ್ಲಿಗೆ ಎಷ್ಟೇ ಕಟ್ಟುನಿಟ್ಟಿನ ಪೊಲೀಸ್ ಅಧಿಕಾರಿಯನ್ನು ನೇಮಕ ಮಾಡಿದರೂ, ಅವರನ್ನು ಥಳಿಸಲಾಗುತ್ತೆ” ಎಂದು ನ್ಯಾಯಮೂರ್ತಿಗಳಾದ ವೇದವ್ಯಾಸಾಚಾರ್ ಶ್ರೀಷಾನಂದ ಸಾಯಿ ಹೇಳಿದ್ದರು.

ನ್ಯಾಯಮೂರ್ತಿಗಳ ಹೇಳಿಕೆ ವ್ಯಾಪಕ ಟೀಕೆಗೆ ಕಾರಣವಗಿತ್ತು. ಈ ಕುರಿತು ಸುಪ್ರೀಂ ಕೋರ್ಟ್ ಗೆ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯವು ಹೈಕೋರ್ಟ್ ನ ರಿಸಿಸ್ಟ್ರಾರ್ ಜನರಲ್ ಗೆ ಸೂಚಿಸಿದೆ. ಈ ಬಗ್ಗೆ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

     

You may also like

News

ಶಿಕ್ಷಣ ತಜ್ಞ ದಿವಂಗತ ಫಾದರ್ ಮೆಲ್ವಿನ್ ಜೆ. ಪಿಂಟೋ ಅವರಿಗೆ ಕ್ಷೇವಿಯರ್ ಐಟಿಐ ಸಂಸ್ಥೆಯಿಂದ ಭಾವಪೂರ್ಣ ಶ್ರದ್ಧಾಂಜಲಿ

ಏಪ್ರಿಲ್ 10ರಂದು ಶುಕ್ರವಾರ ನಿಧನರಾದ ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಉಪಕುಲಪತಿಗಳು ಹಾಗೂ ಹಿರಿಯ ಜೆಸ್ಯೂಟ್ ಶಿಕ್ಷಣ ತಜ್ಞರಾದ ಧರ್ಮಗುರು ವಂದನೀಯ ಫಾದರ್ ಮೆಲ್ವಿನ್ ಜೆ.
News

Graduation Ceremony of Father Muller School & College of Nursing and Father Muller College (Speech & Hearing) celebrated

The Father Muller School of Nursing, Father Muller College of Nursing, and Father Muller College (Speech & Hearing), units of

You cannot copy content of this page