August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅನಂತಾಡಿಯ ನವ ಭಾರತ್ ಯುವಕ ಸಂಘ (ರಿ.) ವತಿಯಿಂದ 6ನೇ ವರ್ಷದ “ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಕಾರ್ಯಕ್ರಮ

ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನವಭಾರತ್ ಯುವಕ ಸಂಘ (ರಿ.) ಇದರ ವತಿಯಿಂದ ಸಪ್ಟಂಬರ್ 22ನೇ ಆದಿತ್ಯವಾರ ಅನಂತಾಡಿ ಪಡಿಪೆರೆ ಗದ್ದೆಯಲ್ಲಿ 6ನೇ ವರ್ಷದ “ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಕಾರ್ಯಕ್ರಮ ನಡೆಯಲಿರುವುದು.

     

ಕಾರ್ಯಕ್ರಮದ ಧ್ವಜಾರೋಹಣವನ್ನು ಡಾಕ್ಟರ್ ರೂಪಲತಾ ಕೊಂಗಲಾಯಿ ನೆರವೇರಿಸಲಿದ್ದು, ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅನಂತಾಡಿ ಶ್ರೀ ಉಳ್ಳಾಲ್ತಿ ದೇವಸ್ಥಾನದ ಆಡಳಿತ ಮುಖ್ಯಸ್ಥ ನರೇಂದ್ರ ರೈ ನೆಲ್ತೋಟು ಮಾಡಲಿದ್ದಾರೆ. ದೇವಸ್ಥಾನದ ಅರ್ಚಕ ಗೋಪಾಲಕೃಷ್ಣ ಬನ್ನಿಂತಾಯ ಕ್ರೀಡಾ ಜ್ಯೋತಿಯನ್ನು ಪ್ರಜ್ವಲಿಸಿ, ಕ್ರೀಡಾಕೂಟದ ಕೆಸರುಗದ್ದೆಯ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರ ಸಂಘದ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಹಾಗೂ ವಿಠಲ ಕೋಟ್ಯಾನ್ ಪೊಯ್ಯೇ ಮಾಡಲಿರುವರು.

ಕೆಸರು ಗದ್ದೆಯಲ್ಲಿ ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಪುರುಷರಿಗೆ, ವಿವಿಧ ಕ್ರೀಡಾ ಕೂಟಗಳನ್ನು ನಡೆಸಲಾಗುವುದು ಹಾಗೂ ಈ ಸಂದರ್ಭದಲ್ಲಿ ನಮ್ಮ ತುಳುವ ಸಂಸ್ಕೃತಿಯ ಚಾಪೆ, ಬುಟ್ಟಿ ಹಾಗೂ ತೆಂಗಿನಗರಿ ನೆಯ್ಯುವುದು, ಮುಟ್ಟಾಲೆ ಕಟ್ಟುವುದು, ಅಕ್ಕಿ ಮುಡಿ ಕಟ್ಟುವ ಪ್ರಾತ್ಯಕ್ಷತೆ ನಡೆಸಲಾಗುವುದು.

ವಿಶೇಷ ಸಾಧನೆಗೈದ ಮಹನೀಯರಾದ ಗಂಗಾಧರ ಕರಿಯ ಪಂಡಿತ್ ಗೋಳಿಕಟ್ಟೆ, ವೈಶಾಕ್ ವೈಭವ್ ಮಡಿವಾಳ ಅನಂತಾಡಿ ಇವರುಗಳನ್ನು ಅಭಿನಂದಿಸಲಾಗುವುದು. ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟನೆಯ ಅಧ್ಯಕ್ಷ ಅನೀಶ್ ಅಶ್ವತ್ತಾಡಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

     

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page