February 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬಂಟ್ವಾಳ ಇದರ ಸಭೆ

ಬಂಟ್ವಾಳ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬಂಟ್ವಾಳ ಇದರ ಸಭೆ ಮಂಗಳವಾರ ಸಪ್ಟಂಬರ್ 24ರಂದು ಬಂಟ್ವಾಳ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉನ್ನತೀ ಸೌಧದಲ್ಲಿ ನಡೆಯಿತು.

ಬಂಟ್ವಾಳ ತಾಲೂಕು ಸಿದ್ದಕಟ್ಟೆ ಮಧ್ಯ ವರ್ಜನ ಶಿಬಿರದ ಸಂಚಾಲಕ ಅರ್ಕ ಕೀರ್ತಿಂದ್ರ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ರೊನಾಲ್ಡ್ ಡಿಸೋಜಾ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆ ಕಾರ್ಯಕ್ರಮ ಅಕ್ಟೋಬರ್ 6ರಂದು ಬಂಟ್ವಾಳ ಶ್ರೀ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಸುವುದೆಂದು, ತೀರ್ಮಾನಿಸಿ, ಕಾರ್ಯಕ್ರಮದ ವ್ಯವಸ್ಥೆಯ ಜವಾಬ್ದಾರಿಯನ್ನು ಹಂಚಲಾಯಿತು.

ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಪ್ರಕಾಶ್ ಕಾರಂತ್, ತುಂಬೆ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಪ್ರೊಫೆಸರ್ ತುಕಾರಾಮ ಪೂಜಾರಿ ವೇದಿಕೆಯಲ್ಲಿದ್ದರು.

ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ವಲಯ ಮೇಲ್ವಿಚಾರಕರು ಉಪಸ್ಥಿತರಿದ್ದರು. ವಗ್ಗ ವಲಯ ಮೇಲ್ವಿಚಾರಕಿ ಸವಿತಾ ಸ್ವಾಗತಿಸಿ, ಪೊಳಲಿ ವಲಯ ಮೇಲ್ವಿಚಾರಕಿ ಹರಿಣಾಕ್ಷಿ ಹಿಂದಿನ ಸಭೆಯ ವರದಿ ವಾಚಿಸಿ, ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕ್ರಷ್ಣ ಎಂ. ವಂದಿಸಿ, ತುಂಬೆ ವಲಯದ ಮೇಲ್ವಿಚಾರಕಿ ಮಮತಾ  ಕಾರ್ಯಕ್ರಮ ನಿರೂಪಿಸಿದರು.

You may also like

News

ಪಾಲ್ದನೆ ಸಂತ ತೆರೆಸಾ ಚರ್ಚ್‌ನಲ್ಲಿ ವಾರ್ಷಿಕ ಹಬ್ಬ, ಸಮುದಾಯ ದಿನಾಚರಣೆ ಹಾಗೂ ವಿಂಶತಿ ಸಂಭ್ರಮ ವಿಜೃಂಭಣೆಯಿಂದ ಆಚರಣೆ

ಮನುಷ್ಯನು ಸಂಘ ಜೀವಿಯಾಗಿ ಸಮುದಾಯದಲ್ಲಿ ಬದುಕುವವನು – ಫಾದರ್ ಅಜಿತ್ ಮಿನೇಜಸ್ ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆ ಸಂತ ತೆರೆಸಾ ಚರ್ಚ್‌ನಲ್ಲಿ ವಾರ್ಷಿಕ ಹಬ್ಬ, ಸಮುದಾಯ ದಿನಾಚರಣೆ
News

Father Muller hosts ‘FMMC HEMOCON -2026’

The Department of General Medicine, Father Muller Medical College, Mangaluru, conducted a one-day CME, ‘FMMC HEMOCON -2026’ on 14th February,

You cannot copy content of this page