August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರ್ನಾಟಕ ಕ್ಯಾಥೋಲಿಕ್ ‘ತಿಂಕ್ ಟ್ಯಾಂಕ್’‌ನ ನೂತನ ಅಧ್ಯಕ್ಷರಾಗಿ ಮಂಗಳೂರಿನ ರೋಯ್ ಕ್ಯಾಸ್ತೆಲಿನೊ ಸರ್ವಾನುಮತದಿಂದ ಆಯ್ಕೆ

ಬೆಂಗಳೂರು ಸಪ್ಟಂಬರ್ 25  : ಬೆಂಗಳೂರಿನ ಸುವೋಧನಾ ಕ್ರಾಸ್ ನಲ್ಲಿ ನಡೆದ ಕರ್ನಾಟಕ ಕ್ಯಾಥೋಲಿಕ್ ‘ತಿಂಕ್ ಟ್ಯಾಂಕ್‌’ನ ವಾರ್ಷಿಕ ಸಭೆಯಲ್ಲಿ ಸಮಾಜದ ಸವಾಲುಗಳನ್ನು ಎದುರಿಸಲು ‘ತಿಂಕ್ ಟ್ಯಾಂಕ್‌’ನ ಪಾತ್ರವನ್ನು ಬಲಪಡಿಸುವ ಉದ್ದೇಶದಿಂದ ಚುನಾವಣೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಮಂಗಳೂರು ಧರ್ಮಕ್ಷೇತ್ರದ ಸಾರ್ವಜನಿಕ ಸಂಪರ್ಕ ಅಧಿಕಾರಿ ರೋಯ್ ಕ್ಯಾಸ್ತೆಲಿನೊ ಅವರನ್ನು ನೂತನ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಜಾಕಬ್ ಕ್ರಾಸ್ತಾ ಹಾಗೂ ಆ್ಯಂಟನಿ ಮೆಂಡೋನ್ಸಾ ಇವರನ್ನು ಉಪಾಧ್ಯಕ್ಷರುಗಳಾಗಿ ಆಯ್ಕೆ ಮಾಡಲಾಯಿತು. ಲೈಟಿ ಕ್ಷೇತ್ರದ ಪ್ರಾದೇಶಿಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಕ್ಲಾರಾ ಫೆರ್ನಾಂಡಿಸ್ ಕಾರ್ಯದರ್ಶಿಯಾಗಿ, ನಿರ್ಮಲರವರನ್ನು ಜಂಟಿ ಕಾರ್ಯದರ್ಶಿಯಾಗಿ ನೇಮಕ  ಮಾಡಲಾಯಿತು.

ಕರ್ನಾಟಕ ಕ್ಯಾಥೋಲಿಕ್ ‘ತಿಂಕ್ ಟ್ಯಾಂಕ್’ ಕಾನೂನು, ನಾಗರಿಕ ಸೇವೆಗಳು, ಶಿಕ್ಷಣ, ಮಾಧ್ಯಮ ಮತ್ತು ಆರೋಗ್ಯ ಸೇವೆಗಳಂತಹ ವಿಭಿನ್ನ ಕ್ಷೇತ್ರಗಳ ವೃತ್ತಿಪರರನ್ನು ಒಗ್ಗೂಡಿಸುತ್ತದೆ. ಈ ಮೂಲಕ ಕರ್ನಾಟಕದಲ್ಲಿರುವ ಚರ್ಚ್ ಗಳಿಗೆ ತಾಂತ್ರಿಕ ಸಲಹೆ ಮತ್ತು ಬೆಂಬಲವನ್ನು ನೀಡುತ್ತದೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page