April 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರ್ನಾಟಕ ಕ್ಯಾಥೋಲಿಕ್ ‘ತಿಂಕ್ ಟ್ಯಾಂಕ್’‌ನ ನೂತನ ಅಧ್ಯಕ್ಷರಾಗಿ ಮಂಗಳೂರಿನ ರೋಯ್ ಕ್ಯಾಸ್ತೆಲಿನೊ ಸರ್ವಾನುಮತದಿಂದ ಆಯ್ಕೆ

ಬೆಂಗಳೂರು ಸಪ್ಟಂಬರ್ 25  : ಬೆಂಗಳೂರಿನ ಸುವೋಧನಾ ಕ್ರಾಸ್ ನಲ್ಲಿ ನಡೆದ ಕರ್ನಾಟಕ ಕ್ಯಾಥೋಲಿಕ್ ‘ತಿಂಕ್ ಟ್ಯಾಂಕ್‌’ನ ವಾರ್ಷಿಕ ಸಭೆಯಲ್ಲಿ ಸಮಾಜದ ಸವಾಲುಗಳನ್ನು ಎದುರಿಸಲು ‘ತಿಂಕ್ ಟ್ಯಾಂಕ್‌’ನ ಪಾತ್ರವನ್ನು ಬಲಪಡಿಸುವ ಉದ್ದೇಶದಿಂದ ಚುನಾವಣೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಮಂಗಳೂರು ಧರ್ಮಕ್ಷೇತ್ರದ ಸಾರ್ವಜನಿಕ ಸಂಪರ್ಕ ಅಧಿಕಾರಿ ರೋಯ್ ಕ್ಯಾಸ್ತೆಲಿನೊ ಅವರನ್ನು ನೂತನ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಜಾಕಬ್ ಕ್ರಾಸ್ತಾ ಹಾಗೂ ಆ್ಯಂಟನಿ ಮೆಂಡೋನ್ಸಾ ಇವರನ್ನು ಉಪಾಧ್ಯಕ್ಷರುಗಳಾಗಿ ಆಯ್ಕೆ ಮಾಡಲಾಯಿತು. ಲೈಟಿ ಕ್ಷೇತ್ರದ ಪ್ರಾದೇಶಿಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಕ್ಲಾರಾ ಫೆರ್ನಾಂಡಿಸ್ ಕಾರ್ಯದರ್ಶಿಯಾಗಿ, ನಿರ್ಮಲರವರನ್ನು ಜಂಟಿ ಕಾರ್ಯದರ್ಶಿಯಾಗಿ ನೇಮಕ  ಮಾಡಲಾಯಿತು.

ಕರ್ನಾಟಕ ಕ್ಯಾಥೋಲಿಕ್ ‘ತಿಂಕ್ ಟ್ಯಾಂಕ್’ ಕಾನೂನು, ನಾಗರಿಕ ಸೇವೆಗಳು, ಶಿಕ್ಷಣ, ಮಾಧ್ಯಮ ಮತ್ತು ಆರೋಗ್ಯ ಸೇವೆಗಳಂತಹ ವಿಭಿನ್ನ ಕ್ಷೇತ್ರಗಳ ವೃತ್ತಿಪರರನ್ನು ಒಗ್ಗೂಡಿಸುತ್ತದೆ. ಈ ಮೂಲಕ ಕರ್ನಾಟಕದಲ್ಲಿರುವ ಚರ್ಚ್ ಗಳಿಗೆ ತಾಂತ್ರಿಕ ಸಲಹೆ ಮತ್ತು ಬೆಂಬಲವನ್ನು ನೀಡುತ್ತದೆ.

You may also like

News

ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ – ಏಪ್ರಿಲ್ 18ಕ್ಕೆ ಪೂರ್ವಭಾವಿ ಸಭೆ ಹಾಗೂ ಸ್ವಾಗತ ಸಮಿತಿ ರಚನೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಘಟಕದ ಸಹಯೋಗದಲ್ಲಿ ಮೇ 12ರಂದು ನಡೆಯಲಿರುವ ‘ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ’ದ ಸಿದ್ಧತೆಗಳು
News

ಮಂಗಳೂರು ಧರ್ಮಕ್ಷೇತ್ರದ ವಿವಿಧ ಧರ್ಮಗುರುಗಳ 2026 ನೇ ಸಾಲಿನ ವರ್ಗಾವಣೆ ಪಟ್ಟಿ ಪ್ರಕಟ

ಬಿಷಪ್ ಪರಮ ಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಆದೇಶ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ

You cannot copy content of this page