August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಆಸ್ತಿ ನೋಂದಣಿ ಮಾಡುವವರಿಗೆ ಸುವರ್ಣಾವಕಾಶ ಶನಿವಾರ ಮತ್ತು ಭಾನುವಾರ ರಜೆ ದಿನಗಳಲ್ಲೂ ಅವಕಾಶ ಕಲ್ಪಿಸಿದ ಸರಕಾರ

ರಾಜ್ಯದಲ್ಲಿ ಅಕ್ಟೋಬರ್ 21ರಿಂದ ಶನಿವಾರ ಮತ್ತು ಭಾನುವಾರದ ರಜೆ ದಿನಗಳಲ್ಲೂ ಉಪ ನೋಂದಣಾಧಿಕಾರಿಗಳ ಕಚೇರಿಗಳು ಕಾರ್ಯನಿರ್ವಹಿಸಲಿವೆ. ಆಸ್ತಿ ನೋಂದಣಿ, ವರ್ಗಾವಣೆ ಸೇರಿದಂತೆ ಎಲ್ಲ ನೋಂದಣಿಗಳನ್ನು ಈ ದಿನಗಳಲ್ಲೂ ನಿರ್ವಹಿಸಬಹುದು.

ಶನಿವಾರ ಮತ್ತು ಭಾನುವಾರ ನೋಂದಣಿಗೆ ಅವಕಾಶ ನೀಡಬೇಕು ಎಂಬ ಬೇಡಿಕೆ ಈ ಹಿಂದಿನಿಂದಲೇ ಇತ್ತು. ಇದರಿಂದ ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಕೆಲಸ ಮಾಡುವವರಿಗೆ ಹಾಗೂ ಹೊರ ರಾಜ್ಯದಲ್ಲಿ ಕಾರ್ಯನಿರ್ವಹಿಸುವವರಿಗೆ ಅನುಕೂಲವಾಗಲಿದೆ. ಪ್ರತಿ ಜಿಲ್ಲೆಯಲ್ಲಿ ನಾಲ್ಕು ಅಥವಾ ಐದು ಉಪ ನೋಂದಣಿ ಕಚೇರಿಗಳಿದ್ದರೆ, ಒಂದು ಕಚೇರಿ ಮಾತ್ರ ಈ ಎರಡು ದಿವಸಗಳಲ್ಲಿ ಕಾರ್ಯನಿರ್ವಹಿಸಲಿವೆ. ರಜಾ ದಿನಗಳಲ್ಲಿ ಕಾರ್ಯನಿರ್ವಹಿಸಿದ ಕಚೇರಿಗಳಿಗೆ ಮಂಗಳವಾರ ರಜೆ ನೀಡಲಾಗುತ್ತದೆ.

ಸ್ವತ್ತು ನೋಂದಾಯಿಸಿಕೊಳ್ಳಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವಾಗಲೇ ಶನಿವಾರ ಮತ್ತು ಭಾನುವಾರ ನೋಂದಣಿ ಮಾಡಿಸಿಕೊಳ್ಳುವ ನಮೂದನ್ನು ಅರ್ಜಿದಾರನು ಮಾಡಬೇಕಾಗುತ್ತದೆ. ಯಾವ ಕಚೇರಿಗಳು ಶನಿವಾರ ಮತ್ತು ಭಾನುವಾರ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಆನ್‌ಲೈನ್‌ ಮೂಲಕವೇ ಸಾರ್ವಜನಿಕರಿಗೆ ತಿಳಿಸಲಾಗುವುದು. ಇದಕ್ಕಾಗಿ ಕಾನೂನಿನ ತಿದ್ದುಪಡಿಯನ್ನು ಮಾಡಿ ಸಚಿವ ಸಂಪುಟದ ಒಪ್ಪಿಗೆಯನ್ನು ಪಡೆಯಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಒಪ್ಪಿಗೆಯನ್ನೂ ಪಡೆಯಲಾಗಿದೆ. ಇನ್ನು ರಜೆ ದಿನಗಳಲ್ಲೂ ಆಸ್ತಿ ನೋಂದಣಿ ಖಾಸಗಿ ನೌಕರರಿಗೆ ಅನುಕೂಲ ಕಲ್ಪಿಸಲು ಸರ್ಕಾರ ಕ್ರಮ ತೆಗೆದುಕೊಂಡಿದೆ.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page