October 16, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಲ್ಲಿಪಾದೆಯಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ಶಿಬಿರ

ಬಂಟ್ವಾಳ : ಸಂತ ಅಂತೋನಿಯವರ ದೇವಾಲಯ ಅಲ್ಲಿಪಾದೆ ಹಾಗೂ ಸ್ತ್ರೀ ಸಂಘಟನೆ ಅಲ್ಲಿಪಾದೆ ಘಟಕ ಮತ್ತು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಇದರ ಸಹಯೋಗದಲ್ಲಿ ಸ್ತ್ರೀ ಆಯೋಗ, ಅರೋಗ್ಯ ಆಯೋಗ ಮತ್ತು ಯುವ ಆಯೋಗ ಇವರ ಸಹಕಾರದೊಂದಿಗೆ ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ಶಿಬಿರವು ಅಲ್ಲಿಪಾದೆ ಚರ್ಚ್ ಸೌಹಾರ್ದ ಸಭಾ ಭವನದಲ್ಲಿ ರವಿವಾರ ಸಪ್ಟಂಬರ್ 22ರಂದು ನಡೆಯುತು. ಶಿಬಿರವನ್ನು ಚರ್ಚ್ ಧರ್ಮಗುರು ವಂದನೀಯ ಫಾದರ್ ರೋಬರ್ಟ್ ಡಿಸೋಜ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆ ವೈದ್ಯರಾದ ಡಾ. ಜ್ಞಾನೇಶ್ವರಿ ಜಯರಾಮ್, ಡಾ. ಸೋನಿಯಾ ಕೆ. ಎಲ್. ಸಿಕ್ವೆರಾ, ಪ್ರಮುಖರಾದ ರಂಜನ್ ಎ.ವಿ., ಕ್ಲುನಿ ಕಾನ್ವೆಂಟ್ ನ ಸುಪೀರಿಯರ್ ಭಗಿನಿ ನಸಿಸ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ನವೀನ್ ಮೊರಸ್, ಕಾರ್ಯದರ್ಶಿ ಕಿರಣ್ ನೊರೊನ್ಹಾ ಹಾಗೂ ಆಯೋಗಗಳ ಸಂಯೋಜಕ ಜೋನ್ ವಾಲ್ಡರ್ ಮೊದಲಾದವರು ಉಪಸ್ಥಿತರಿದ್ದರು. ಅಲ್ಲಿಪಾದೆ ಸ್ತ್ರೀ ಸಂಘದ ಅಧ್ಯಕ್ಷೆ ಲವೀನಾ ಮೋರಸ್ ಸ್ವಾಗತಿಸಿ, ರೆನ್ನಿ ಫೆರ್ನಾಂಡಿಸ್ ವಂದಿಸಿದರು. ಕುಮಾರಿ ವೆನೆಸ್ಸಾ ಮೊರಸ್ ಕಾರ್ಯಕ್ರಮ ನಿರೂಪಿಸಿದರು.

 

You may also like

News

RSS ಚಟುವಟಿಕೆಗಳಿಂದ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗಿದೆ – ಮಾಜಿ ಸಚಿವ ಬಿ. ರಮಾನಾಥ ರೈ

ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಿಲುವು ಜಾತ್ಯತೀತತೆ ಅದಕ್ಕೇ ಜನ ಬೆಂಬಲ ರಾಜ್ಯದ ಸಚಿವರಾದ ಪ್ರಿಯಾಂಕ ಖರ್ಗೆ RSS ಚಟುವಟಿಕೆಗಳ ಕುರಿತು ನೀಡಿರುವ ಹೇಳಿಕೆ ಸರಿಯಾಗಿದೆ ಎಂದು ಮಾಜಿ
News

ದಕ್ಷಿಣ ಕನ್ನಡ ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ವಾರ್ಷಿಕ ಸಭೆ

ಮಾನವೀಯ ಸೇವೆ ರೆಡ್‌ಕ್ರಾಸ್ ಸಂಸ್ಥೆಯ ಗುರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ರಕ್ತದಾನ, ಆರೋಗ್ಯ ಕಾಳಜಿ, ವಿಪತ್ತು ಪರಿಹಾರ ಸಹಿತ ಹಲವು ಸೇವಾ ಕಾರ್ಯಗಳ ಮೂಲಕ ರೆಡ್‌ಕ್ರಾಸ್ 

You cannot copy content of this page