August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಲ್ಲಿಪಾದೆಯಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ಶಿಬಿರ

ಬಂಟ್ವಾಳ : ಸಂತ ಅಂತೋನಿಯವರ ದೇವಾಲಯ ಅಲ್ಲಿಪಾದೆ ಹಾಗೂ ಸ್ತ್ರೀ ಸಂಘಟನೆ ಅಲ್ಲಿಪಾದೆ ಘಟಕ ಮತ್ತು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಇದರ ಸಹಯೋಗದಲ್ಲಿ ಸ್ತ್ರೀ ಆಯೋಗ, ಅರೋಗ್ಯ ಆಯೋಗ ಮತ್ತು ಯುವ ಆಯೋಗ ಇವರ ಸಹಕಾರದೊಂದಿಗೆ ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ಶಿಬಿರವು ಅಲ್ಲಿಪಾದೆ ಚರ್ಚ್ ಸೌಹಾರ್ದ ಸಭಾ ಭವನದಲ್ಲಿ ರವಿವಾರ ಸಪ್ಟಂಬರ್ 22ರಂದು ನಡೆಯುತು. ಶಿಬಿರವನ್ನು ಚರ್ಚ್ ಧರ್ಮಗುರು ವಂದನೀಯ ಫಾದರ್ ರೋಬರ್ಟ್ ಡಿಸೋಜ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆ ವೈದ್ಯರಾದ ಡಾ. ಜ್ಞಾನೇಶ್ವರಿ ಜಯರಾಮ್, ಡಾ. ಸೋನಿಯಾ ಕೆ. ಎಲ್. ಸಿಕ್ವೆರಾ, ಪ್ರಮುಖರಾದ ರಂಜನ್ ಎ.ವಿ., ಕ್ಲುನಿ ಕಾನ್ವೆಂಟ್ ನ ಸುಪೀರಿಯರ್ ಭಗಿನಿ ನಸಿಸ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ನವೀನ್ ಮೊರಸ್, ಕಾರ್ಯದರ್ಶಿ ಕಿರಣ್ ನೊರೊನ್ಹಾ ಹಾಗೂ ಆಯೋಗಗಳ ಸಂಯೋಜಕ ಜೋನ್ ವಾಲ್ಡರ್ ಮೊದಲಾದವರು ಉಪಸ್ಥಿತರಿದ್ದರು. ಅಲ್ಲಿಪಾದೆ ಸ್ತ್ರೀ ಸಂಘದ ಅಧ್ಯಕ್ಷೆ ಲವೀನಾ ಮೋರಸ್ ಸ್ವಾಗತಿಸಿ, ರೆನ್ನಿ ಫೆರ್ನಾಂಡಿಸ್ ವಂದಿಸಿದರು. ಕುಮಾರಿ ವೆನೆಸ್ಸಾ ಮೊರಸ್ ಕಾರ್ಯಕ್ರಮ ನಿರೂಪಿಸಿದರು.

 

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page