February 18, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗ್ರಾಮಾಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಂಟ್ವಾಳದಲ್ಲೂ ಮುಷ್ಕರ

ಬಂಟ್ವಾಳ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ, ರಾಜ್ಯ ಸಂಘದ ಕಾರ್ಯಕಾರಿಣಿ ಸಭೆ ನಿರ್ಣಯದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರವನ್ನು ರಾಜ್ಯಾದ್ಯಂತ ಆಯೋಜಿಸಿದ್ದು, ಅದರಂತೆ ಬಂಟ್ವಾಳದಲ್ಲೂ ಗುರುವಾರ ಸಪ್ಟಂಬರ್ 26ರಂದು ಮುಷ್ಕರ ನಡೆಯಿತು.

ಗ್ರಾಮಾಡಳಿತ ಅಧಿಕಾರಿಗಳ ಸಂಘದ ಬಂಟ್ವಾಳ ತಾಲೂಕು ಅಧ್ಯಕ್ಷ ಅನಿಲ್ ಕೆ. ಪೂಜಾರಿ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಉಮಾನಾಥ ರೈ ಮೇರಾವು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಮಾತನಾಡಿ ಗ್ರಾಮಾಡಳಿತ ಅಧಿಕಾರಿಗಳ ಬೇಡಿಕೆಗೆ ಪೂರಕವಾಗಿ ನಮ್ಮ ಸಂಘವು ಬೆಂಬಲ ನೀಡುತ್ತದೆ ಎಂದರು. ಇದೇ ವೇಳೆ ಸಂಘದ ವತಿಯಿಂದ ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಅವರ ಮೂಲಕ ಕಂದಾಯ ಸಚಿವರಿಗೆ ಮನವಿಯನ್ನು ಸಲ್ಲಿಸಲಾಯಿತು. ಮುಷ್ಕರಕ್ಕೆ ಬೆಂಬಲವಾಗಿ ಕಂದಾಯ ಇಲಾಖಾ ನೌಕರರ ಸಂಘದ ತಾಲೂಕು ಅಧ್ಯಕ್ಷ ರಾಜೇಶ್ ನಾಯ್ಕ್, ರಾಜ್ಯ ಗ್ರಾಮಾಡಳಿತಾಧಿಕಾರಿಗಳ ಸಂಘದ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಜೆ. ಜನಾರ್ದನ, ಎನ್.ಪಿ.ಎಸ್. ನೌಕರರ ಸಂಘದ ತಾಲೂಕು ಅಧ್ಯಕ್ಷ ಸಂತೋಷ್ ಸಹಿತ ನಾನಾ ಇಲಾಖೆಗಳ ಪ್ರತಿನಿಧಿಗಳು ಭಾಗವಹಿಸಿದರು.

ಗ್ರಾಮಾಡಳಿತ ಅಧಿಕಾರಿಗಳ ಸಂಘದ ತಾಲೂಕು ಉಪಾಧ್ಯಕ್ಷ ಕರಿಬಸಪ್ಪ ನಾಯ್ಕ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್, ಜಿಲ್ಲಾ ಪ್ರತಿನಿಧಿ ಪ್ರಕಾಶ್ ಮತ್ತಿಹಳ್ಳಿ, ಕೋಶಾಧಿಕಾರಿ  ವೈಶಾಲಿ, ಗೌರವಾಧ್ಯಕ್ಷ ಪ್ರವೀಣ್ ಕುಮಾರ್ ಸಹಿತ ಗ್ರಾಮಾಡಳಿತ ಅಧಿಕಾರಿಗಳು ಮುಷ್ಕರದಲ್ಲಿ ಪಾಲ್ಗೊಂಡರು.

You may also like

News

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಶೀಟರ್ ಸಫಾನ್ ಹುಸೇನ್ ಮಂಗಳೂರು ಸಿಸಿಬಿ ಪೊಲೀಸರ ಬಲೆಗೆ

ಕೊಲೆ, ಕೊಲೆಯತ್ನ ಸೇರಿದಂತೆ 31ಕ್ಕೂ ಹೆಚ್ಚು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿ ಆರೋಪಿ ತಲೆಮರೆಸಿಕೊಳ್ಳಲು, ನಕಲಿ ದಾಖಲೆ ಸೃಷ್ಟಿಸಲು ಮತ್ತು ವಿದೇಶಕ್ಕೆ ಪರಾರಿಯಾಗಲು ಸಹಕರಿಸಿದವರ ಮೇಲೂ ತನಿಖೆ 
News

ಅಧಿಕಾರಕ್ಕಿಂತ ಸಮುದಾಯದ ಹಿತವೇ ಮುಖ್ಯ – MLC ಐವನ್ ಡಿಸೋಜ ಕಾರ್ಯವೈಖರಿಗೆ ಹಿರಿಯ ಪತ್ರಕರ್ತ ಹ್ಯಾರಿ ಡಿಸೋಜ ಬೆಂಗಳೂರು ಮೆಚ್ಚುಗೆ

ಬೆಂಗಳೂರು: ರಾಜಕಾರಣಿಗಳು ಸಾಮಾನ್ಯವಾಗಿ ಅಧಿಕಾರವನ್ನು ಉಳಿಸಿಕೊಳ್ಳಲು ಸ್ವಾರ್ಥದ ರಾಜಕಾರಣ ಮಾಡುವುದು ಸಹಜ. ಆದರೆ, ಫೆಬ್ರವರಿ 17ರಂದು ಮಂಗಳವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ

You cannot copy content of this page