October 16, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಿನ್ನಿಗೋಳಿ – ಪದ್ಮನ್ನೂರು ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿಯವರಿಗೆ ಐಕ್ಯ ವೇದಿಕೆ ಕೊಡಾಜೆ ವತಿಯಿಂದ ಅಭಿನಂದನೆ

ಕಿನ್ನಿಗೋಳಿ ಸಪ್ಟಂಬರ್ 28  : ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಕೊಡಾಜೆಯ ‘ಐಕ್ಯ ವೇದಿಕೆ ಕೊಡಾಜೆ’ ಇದರ ವತಿಯಿಂದ ಐಕ್ಯ-ಭಾವೈಕ್ಯತೆಯನ್ನು ಮೈಗೂಡಿಸಿಕೊಂಡು ಸರ್ವ ಧರ್ಮೀಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಾನವೀಯ ಮೌಲ್ಯಗಳಿಗೆ ಒತ್ತು ನೀಡುತ್ತಿರುವ ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿ,  ಪದ್ಮನ್ನೂರು – ಕಿನ್ನಿಗೋಳಿ ಇದರ ಅದ್ಯಕ್ಷರು ಹಾಗೂ ಸರ್ವ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವು ಭಾನುವಾರ ಸಪ್ಟಂಬರ್ 29  ಸಂಜೆ ಸಂಜೆ 5.30ಕ್ಕೆ  ಪದ್ಮನ್ನೂರಿನ ಸಾರ್ವಜನಿಕ ಯಕ್ಷಗಾನ ಬಯಲಾಟ ಸುವರ್ಣ ಮಹೋತ್ಸವ ಸಭಾ ಭವನದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಸ್ಥಳೀಯ ದೇವಸ್ಥಾನದ ಅರ್ಚಕರು, ಮಸೀದಿ ಖತೀಬರು ಹಾಗೂ ಚರ್ಚ್ ನ ಧರ್ಮಗುರುಗಳಿಗೆ ಗೌರವಾರ್ಪಣೆ,  ಸಾರ್ವಜನಿಕ ಯಕ್ಷಗಾನ ಬಯಲಾಟ  ಸಮಿತಿಯ ಅಧ್ಯಕ್ಷರಿಗೆ ಸನ್ಮಾನ, ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ನೆರವೇರಲಿದೆ ಎಂದು ಐಕ್ಯ ವೇದಿಕೆ ಕೊಡಾಜೆ ಇವರ ಪ್ರಕಟಣೆ ತಿಳಿಸಿದೆ.

You may also like

News

RSS ಚಟುವಟಿಕೆಗಳಿಂದ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗಿದೆ – ಮಾಜಿ ಸಚಿವ ಬಿ. ರಮಾನಾಥ ರೈ

ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಿಲುವು ಜಾತ್ಯತೀತತೆ ಅದಕ್ಕೇ ಜನ ಬೆಂಬಲ ರಾಜ್ಯದ ಸಚಿವರಾದ ಪ್ರಿಯಾಂಕ ಖರ್ಗೆ RSS ಚಟುವಟಿಕೆಗಳ ಕುರಿತು ನೀಡಿರುವ ಹೇಳಿಕೆ ಸರಿಯಾಗಿದೆ ಎಂದು ಮಾಜಿ
News

ದಕ್ಷಿಣ ಕನ್ನಡ ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ವಾರ್ಷಿಕ ಸಭೆ

ಮಾನವೀಯ ಸೇವೆ ರೆಡ್‌ಕ್ರಾಸ್ ಸಂಸ್ಥೆಯ ಗುರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ರಕ್ತದಾನ, ಆರೋಗ್ಯ ಕಾಳಜಿ, ವಿಪತ್ತು ಪರಿಹಾರ ಸಹಿತ ಹಲವು ಸೇವಾ ಕಾರ್ಯಗಳ ಮೂಲಕ ರೆಡ್‌ಕ್ರಾಸ್ 

You cannot copy content of this page