January 19, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸ್ಥಳೀಯ ಸಂಸ್ಥೆಗಳ MLC ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ ಹೆಸರು ಮುಂಚೂಣಿಯಲ್ಲಿ

MLC Election ಮಂಗಳೂರು: ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಎಂಎಲ್ಸಿ (MLC Election) ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಪ್ರಕಾಶ್ ಶೆಟ್ಟಿ ತುಂಬೆ ಇವರ ಹೆಸರು ಮುಂಚೂಣಿಗೆ ಬಂದಿದೆ.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಕಾಶ್ ಶೆಟ್ಟಿ ತುಂಬೆ ಹಾಗೂ ಕಾರ್ಕಳದ ಕಾಂಗ್ರೆಸ್ ನಾಯಕ ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ.

ಆದರೆ ಇನ್ನಷ್ಟು ಹೆಸರುಗಳು ಹೈಕಮಾಂಡ್ ಪಟ್ಟಿಯಲ್ಲಿ ತುಂಬಿಕೊಂಡಿದೆ ಎನ್ನಲಾಗುತ್ತಿದೆ. ಆದರೆ ಎರಡು ಹೆಸರುಗಳು ಮುಂಚೂಣಿಯಲ್ಲಿ ಇವೆ ಎಂದು ಕಾಂಗ್ರೆಸ್ ನ ಆಂತರಿಕ ಮೂಲಗಳು ಹೇಳಿಕೊಂಡಿವೆ.

ಈ ಬಗ್ಗೆ ಕಾಂಗ್ರೆಸ್ ಸಮಿತಿಯನ್ನು ರಚಿಸಿದ್ದು, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಮಿತಿ ಹೈಕಮಾಂಡಿಗೆ ವರದಿ ನೀಡಲಿದೆ ಎಂದು ತಿಳಿದುಬಂದಿದೆ. ಆದರೆ ಬಿಜೆಪಿ ಇದುವರೆಗೆ ಯಾವುದೇ ಅಭ್ಯರ್ಥಿಗಳ ಘೋಷಣೆಯನ್ನು ಮಾಡಲಿಲ್ಲ. ಬಿಜೆಪಿ ಒಳಗಡೆ ಅಭ್ಯರ್ಥಿಯ ಬಗ್ಗೆ ಪೈಪೋಟಿ ಇರುವುದರಿಂದ ಅದು ಹೈಕಮಾಂಡ್ ಅಂಗಳಕ್ಕೆ ತಲುಪಿದೆ ಎನ್ನಲಾಗುತ್ತಿದೆ.

You may also like

News

ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಎಸ್. ನಂಜುಂಡಯ್ಯ ಚಾಮರಾಜನಗರ ಆಯ್ಕೆ

ಕಾಸರಗೋಡು : ಸಂಘಟಕ, ಸಾಹಿತಿ ಶಿಕ್ಷಕ, ಸಾಹಿತ್ಯ ಪರಿಷತ್, ಜಾನಪದ ಪರಿಷತ್ ಮೊದಲಾಗಿ ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಹೆಚ್ಚಿನ ಸಂಘ, ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಎಸ್.
News

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ

You cannot copy content of this page