May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸ್ಥಳೀಯ ಸಂಸ್ಥೆಗಳ MLC ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ ಹೆಸರು ಮುಂಚೂಣಿಯಲ್ಲಿ

MLC Election ಮಂಗಳೂರು: ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಎಂಎಲ್ಸಿ (MLC Election) ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಪ್ರಕಾಶ್ ಶೆಟ್ಟಿ ತುಂಬೆ ಇವರ ಹೆಸರು ಮುಂಚೂಣಿಗೆ ಬಂದಿದೆ.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಕಾಶ್ ಶೆಟ್ಟಿ ತುಂಬೆ ಹಾಗೂ ಕಾರ್ಕಳದ ಕಾಂಗ್ರೆಸ್ ನಾಯಕ ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ.

ಆದರೆ ಇನ್ನಷ್ಟು ಹೆಸರುಗಳು ಹೈಕಮಾಂಡ್ ಪಟ್ಟಿಯಲ್ಲಿ ತುಂಬಿಕೊಂಡಿದೆ ಎನ್ನಲಾಗುತ್ತಿದೆ. ಆದರೆ ಎರಡು ಹೆಸರುಗಳು ಮುಂಚೂಣಿಯಲ್ಲಿ ಇವೆ ಎಂದು ಕಾಂಗ್ರೆಸ್ ನ ಆಂತರಿಕ ಮೂಲಗಳು ಹೇಳಿಕೊಂಡಿವೆ.

ಈ ಬಗ್ಗೆ ಕಾಂಗ್ರೆಸ್ ಸಮಿತಿಯನ್ನು ರಚಿಸಿದ್ದು, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಮಿತಿ ಹೈಕಮಾಂಡಿಗೆ ವರದಿ ನೀಡಲಿದೆ ಎಂದು ತಿಳಿದುಬಂದಿದೆ. ಆದರೆ ಬಿಜೆಪಿ ಇದುವರೆಗೆ ಯಾವುದೇ ಅಭ್ಯರ್ಥಿಗಳ ಘೋಷಣೆಯನ್ನು ಮಾಡಲಿಲ್ಲ. ಬಿಜೆಪಿ ಒಳಗಡೆ ಅಭ್ಯರ್ಥಿಯ ಬಗ್ಗೆ ಪೈಪೋಟಿ ಇರುವುದರಿಂದ ಅದು ಹೈಕಮಾಂಡ್ ಅಂಗಳಕ್ಕೆ ತಲುಪಿದೆ ಎನ್ನಲಾಗುತ್ತಿದೆ.

You may also like

News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC
News

ICYM BORIMAR ಸಂಘಟನೆಯಲ್ಲಿ ‘ಕುಟುಂಬ ರಾಜಕಾರಣ’?: ಯಾರಿಗೂ ತಿಳಿಸದೇ ಒಳಗಿಂದೊಳಗೆ ಚುನಾವಣೆ ನಡೆಸಿದ ಸಚೇತಕ! ಭುಗಿಲೆದ್ದ ಆಕ್ರೋಶ

ಮಂಗಳೂರು ಧರ್ಮಾಧ್ಯಕ್ಷರಿಗೆ ಲಿಖಿತ ದೂರು ನೀಡಿದ ಚರ್ಚ್ ಹಿಂದಿನ ಪಾಲನಾ ಸಮಿತಿ ಕ್ರೈಸ್ತ ಯುವಜನರ ಪ್ರತಿಷ್ಠಿತ ಸಂಘಟನೆಯಾದ ICYM ಬೊರಿಮಾರ್ (BORIMAR) ಘಟಕದಲ್ಲಿ ಸಚೇತಕನು (ANIMATOR) ಧರ್ಮಕ್ಷೇತ್ರದ

You cannot copy content of this page