August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸ್ಥಳೀಯ ಸಂಸ್ಥೆಗಳ MLC ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ ಹೆಸರು ಮುಂಚೂಣಿಯಲ್ಲಿ

MLC Election ಮಂಗಳೂರು: ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಎಂಎಲ್ಸಿ (MLC Election) ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಪ್ರಕಾಶ್ ಶೆಟ್ಟಿ ತುಂಬೆ ಇವರ ಹೆಸರು ಮುಂಚೂಣಿಗೆ ಬಂದಿದೆ.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಕಾಶ್ ಶೆಟ್ಟಿ ತುಂಬೆ ಹಾಗೂ ಕಾರ್ಕಳದ ಕಾಂಗ್ರೆಸ್ ನಾಯಕ ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ.

ಆದರೆ ಇನ್ನಷ್ಟು ಹೆಸರುಗಳು ಹೈಕಮಾಂಡ್ ಪಟ್ಟಿಯಲ್ಲಿ ತುಂಬಿಕೊಂಡಿದೆ ಎನ್ನಲಾಗುತ್ತಿದೆ. ಆದರೆ ಎರಡು ಹೆಸರುಗಳು ಮುಂಚೂಣಿಯಲ್ಲಿ ಇವೆ ಎಂದು ಕಾಂಗ್ರೆಸ್ ನ ಆಂತರಿಕ ಮೂಲಗಳು ಹೇಳಿಕೊಂಡಿವೆ.

ಈ ಬಗ್ಗೆ ಕಾಂಗ್ರೆಸ್ ಸಮಿತಿಯನ್ನು ರಚಿಸಿದ್ದು, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಮಿತಿ ಹೈಕಮಾಂಡಿಗೆ ವರದಿ ನೀಡಲಿದೆ ಎಂದು ತಿಳಿದುಬಂದಿದೆ. ಆದರೆ ಬಿಜೆಪಿ ಇದುವರೆಗೆ ಯಾವುದೇ ಅಭ್ಯರ್ಥಿಗಳ ಘೋಷಣೆಯನ್ನು ಮಾಡಲಿಲ್ಲ. ಬಿಜೆಪಿ ಒಳಗಡೆ ಅಭ್ಯರ್ಥಿಯ ಬಗ್ಗೆ ಪೈಪೋಟಿ ಇರುವುದರಿಂದ ಅದು ಹೈಕಮಾಂಡ್ ಅಂಗಳಕ್ಕೆ ತಲುಪಿದೆ ಎನ್ನಲಾಗುತ್ತಿದೆ.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page