January 19, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದಲ್ಲಿ “ಪೋಷಣ್ ಮಾಸಾಚರಣೆ – 2024″ರ ಸಮಾರೋಪ ಸಮಾರಂಭ

ಬಂಟ್ವಾಳ :  ಎಲ್ಲಾ ಹೆತ್ತವರು ಮಕ್ಕಳ‌ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚು ಆದ್ಯತೆ  ನೀಡುತ್ತಿರುವುದು ಆಶಾದಾಯಕ  ಬೆಳವಣಿಗೆಯಾಗಿದ್ದು, ಈ ಜಾಗೃತಿ ಕಾರ್ಯದಲ್ಲಿ ಅಂಗನವಾಡಿ ಕೇಂದ್ರಗಳ‌ ಪಾತ್ರ ಮಹತ್ತರವಾದದ್ದು  ಎಂದು  ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ, ರೋಟರಿ ಕ್ಲಬ್ ಬಿ.ಸಿ. ರೋಡ್ ಸಿಟಿ, ತಾಲೂಕು ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ, ಬಂಟ್ವಾಳ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಸಜಿಪಮೂಡ ಇವರ ಸಹಭಾಗಿತ್ವದಲ್ಲಿ ಬಿ.ಸಿ. ರೋಡ್ ಇಲ್ಲಿನ ರೋಟರಿ ಸಭಾಂಗಣದಲ್ಲಿ ಸೋಮವಾರ ಸಪ್ಟಂಬರ್ 30ರಂದು ನಡೆದ ರಾಷ್ಟ್ರೀಯ ಪೋಷಣ್ ಅಭಿಯಾನ “ಪೋಷಣ್ ಮಾಸಾಚರಣೆ-2024″ರ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಆರೋಗ್ಯ ಜಾಗೃತಿಯ ಕೆಲಸ ನಿರಂತರವಾಗಿ‌ ಮುನ್ನಡೆಯಬೇಕು‌ ಎಂದ ಅವರು, ಬಂಟ್ವಾಳ ತಾಲೂಕು ಅಪೌಷ್ಠಿಕತೆ ಮುಕ್ತ ತಾಲೂಕು ಆಗುವಲ್ಲಿ ಪ್ರತಿಯೊಬ್ಬರೂ ಶ್ರಮಿಸುವಂತೆ ಕರೆ ನೀಡಿದರು. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಶ್ಮಿ ಯವರು ಅಧ್ಯಕ್ಷತೆ ವಹಿಸಿದ್ದರು,ಹೆರಿಗೆ ಸಂದರ್ಭದಲ್ಲಿ ತಾಯಿ ಮರಣ ಹಾಗೂ ಶಿಶುಮರಣಗಳನ್ನು ತಡೆಯುವ ಉದ್ದೇಶದಿಂದ ಪೋಷಣ್ ಅಭಿಯಾನ  ಸಮುದಾಯ ಜಾಗೃತಿಯ ಕಾರ್ಯ ನಡೆಸುತ್ತಿದೆ ಎಂದರು.

ಜಿಲ್ಲಾ ನಿರೂಪಣಾಧಿಕಾರಿ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್ ರೈ, ಸಜಿಪಮೂಡ  ಆರೋಗ್ಯ ಕೇಂದ್ರದ  ಡಾ. ಮಣಿಕರ್ಣಿಕ, ಬಿ.ಸಿ. ರೋಡ್ ಸಿಟಿ ರೋಟರಿಕ್ಲಬ್ ಅಧ್ಯಕ್ಷ  ಸೇಸಪ್ಪ ಮಾಸ್ಟರ್, ಕಾರ್ಯದರ್ಶಿ ಮಧುಸೂದನ್ ಶೆಣೈ, ತಾಲೂಕು ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ (ರಿ) ಅಧ್ಯಕ್ಷೆ  ಶೋಭಾ ಸಾಸ್ತಾನ  ಉಪಸ್ಥಿತರಿದ್ದರು.

ಪೌಷ್ಠಿಕ ಆಹಾರದ ಮಹತ್ವ ಹಾಗೂ ಸ್ಥಳೀಯ ಆಹಾರ ಸಂಪನ್ಮೂಲ ಸಂಗ್ರಹಣೆ ಕುರಿತಾಗಿ ಜಯರಾಮ ಪೂಜಾರಿಯವರು ಹಾಗೂ ಆರೋಗ್ಯಕರ ಜೀವನ ಶೈಲಿ ಕುರಿತಾಗಿ ನಗರ ಆರೋಗ್ಯ ವೈದ್ಯಾಧಿಕಾರಿ ಡಾ. ಅಶ್ವಿನಿ ಯವರು ಮಾಹಿತಿ‌ ನೀಡಿದರು.

ತಾಲೂಕು ಶಿಶುಅಭಿವೃದ್ಧಿ ಯೋಜನಾಧಿಕಾರಿ ಮಮ್ತಾಜ್ ಸ್ವಾಗತಿಸಿದರು.  ಹಿರಿಯ ಮೇಲ್ಚಿಚಾರಕಿಯರಾದ ಶಾಲಿನಿ ಕಾರ್ಯಕ್ರಮ ನಿರ್ವಹಿಸಿದರು. ಗುಣವತಿ ವಂದಿಸಿದರು. ಪೋಷಣ್ ಅಭಿಯಾನದ ತಾಲೂಕು ಸಂಯೋಜಕಿ ಕು. ನವ್ಯ, ಮೇಲ್ವಿಚಾರಕಿಯರಾದ ನೀತಾ ಕುಮಾರಿ, ಶೋಭಾ ಎಂ., ಸುಜಾತ, ಲೀಲಾವತಿ, ಮುಬೀನಾ ಬಾನು, ಯಶೋಧ, ಕಚೇರಿ ಸಿಬ್ಬಂದಿಗಳಾದ ಯಶವಂತ್, ಗೌತಮ್, ಸುಂದರಿ ಸಹಕರಿಸಿದರು. ವಿವಿಧ ಅಂಗನವಾಡಿ ಕೇಂದ್ರಗಳ ಮೂಲಕ ನಡೆಸಲಾಗಿದ್ದ 52 ಪೌಷ್ಠಿಕ ಆಹಾರಗಳ ಪ್ರದರ್ಶನ ಹಾಗೂ ಸ್ಪರ್ಧೆ ನಡೆಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು.

You may also like

News

ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಎಸ್. ನಂಜುಂಡಯ್ಯ ಚಾಮರಾಜನಗರ ಆಯ್ಕೆ

ಕಾಸರಗೋಡು : ಸಂಘಟಕ, ಸಾಹಿತಿ ಶಿಕ್ಷಕ, ಸಾಹಿತ್ಯ ಪರಿಷತ್, ಜಾನಪದ ಪರಿಷತ್ ಮೊದಲಾಗಿ ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಹೆಚ್ಚಿನ ಸಂಘ, ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಎಸ್.
News

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ

You cannot copy content of this page