October 17, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರೈತರ ಕನಸು ನನಸು ಮಾಡಿದ ಸರಕಾರ : ಕಂದಾಯ ಇಲಾಖೆಯಿಂದ ದರ್ಖಾಸ್ತು ಭೂಮಿಗೂ ಪೋಡಿ ಭಾಗ್ಯ: ಕೃಷಿ ಸಚಿವ ಕೃಷ್ಣ ಬೈರೇಗೌಡ ಇವರಿಂದ ಚಾಲನೆ

ಅಕ್ಟೋಬರ್ 01 : ದರ್ಖಾಸ್ತು ಜಮೀನು ಬಳಿಕ ಕೃಷಿ ಮಾಡುತ್ತಿರುವ ರೈತರಿಗೆ ಸರಕಾರ ಸಿಹಿ ಸುದ್ದಿ ನೀಡಿದೆ. ರೈತರು ಕೃಷಿ ಕಾರ್ಯ ನಡೆಸುತ್ತಿರುವ ಸರ್ಕಾರಿ ಜಮೀನು, ದರ್ಖಾಸ್ತು ಭೂಮಿಗೂ ಪೋಡಿ ಭಾಗ್ಯ ನೀಡಲು ಕಂದಾಯ ಇಲಾಖೆ ಮುಂದಾಗಿದೆ. ಬಹು ಕಾಲದ ರೈತರ ಕನಸು ಸರಕಾರ ನನಸು ಮಾಡಿದೆ.

ಈ ಕಾರ್ಯಕ್ಕೆ ನಾಳೆ ಅಕ್ಟೋಬರ್ 2ರಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಇವರು ಹಾಸನ ಜಿಲ್ಲೆಯಲ್ಲಿ ಚಾಲನೆ ನೀಡಲಿದ್ದಾರೆ. ಪೋಡಿ ಭಾಗ್ಯ ಕಾರ್ಯಕ್ರಮದಿಂದ ದಶಕಗಳ ಹಿಂದೆ ಮಂಜೂರಾದ ಭೂಮಿ ಉಳುಮೆ ಮಾಡುತ್ತಿರುವ ಸುಮಾರು ಐದು ಲಕ್ಷ ರೈತರ ಸಂಕಷ್ಟ ನಿವಾರಣೆ ಆಗಲಿದೆ ಎಂದು ಅಂದಾಜಿಸಲಾಗಿದೆ.

ಸರ್ಕಾರಿ ಭೂಮಿಗಳ ಸಾಗುವಳಿ 59 ಸಾವಿರ ಸರ್ವೇ ನಂಬರ್‌ಗಳ ಪೋಡಿಗಾಗಿ ಅರ್ಹತಾ ಕಡತ ಸಿದ್ಧಪಡಿಸುವ ಕಾರ್ಯಕ್ಕೆ ಈಗಾಗಲೇ ಚಾಲನೆ ದೊರೆತಿದ್ದು, ಅಂತಿಮ ಪಟ್ಟಿ ಸಿದ್ಧಪಡಿಸುವ ಕಾರ್ಯ ನಡೆಯುತ್ತಿದೆ.

ಮೊದಲ ಹಂತದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು, ತಹಶೀಲ್ದಾರ್ ಮೊದಲಾದ ಕಂದಾಯ ಅಧಿಕಾರಿಗಳು ಅಕ್ಟೋಬರ್ 1ರಿಂದ 5ರ ವರೆಗೆ ಅರ್ಹತಾ ಕಡತ ಸಿದ್ಧಪಡಿಸುತ್ತಾರೆ. ಆ ನಂತರ ಸರ್ವೇ ಕಾರ್ಯ ನಡೆದು, ಜಮೀನಿನ ಪೋಡಿ ಕಾರ್ಯ ನಡೆಸಲು ಕಂದಾಯ ಇಲಾಖೆ ಮುಂದಾಗಿದೆ.

ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಸರ್ವೇ ಇಲಾಖೆಯ ಉಪ ನಿರ್ದೇಶಕರಿಗೆ ಈ ಕಾರ್ಯದ ಹೊಣೆಗಾರಿಕೆಯನ್ನು ನೀಡಲಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.

You may also like

News

ತಲೆಮರೆಸಿಕೊಂಡ ಆರೋಪಿಗಳ ಜಾಮೀನುದಾರರ ವಿರುದ್ದ ಕ್ರಮ

ಆರೋಪಿಗಳು ಸ್ವತಃ ನ್ಯಾಯಾಲಯಕ್ಕೆ ಶರಣು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆಯ ಆರೋಪಿಗಳ ಜಾಮೀನುದಾರರ
News

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸರಸ್ವತಿ ಮಂಟಪ ಲೋಕಾರ್ಪಣೆ

ಧರ್ಮಾಚರಣೆಯಿಂದ ಪ್ರಪಂಚಕ್ಕೆ ಶ್ರೇಯಸ್ಸು – ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಧರ್ಮಾಚರಣೆಯಿಂದ ಪ್ರಪಂಚಕ್ಕೆ ಶ್ರೇಯಸ್ಸು. ಧರ್ಮದಿಂದಲೇ ಸುಖ, ಸಂಪತ್ತು ಸಿದ್ಧಿಸುವುದು. ಜಗತ್ತಿನಲ್ಲಿ ಹಲವಾರು ಸೌಖರ್ಯಗಳಿದ್ದರೂ‌

You cannot copy content of this page