May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದಲ್ಲಿ ಸಮನ್ವಯ ಶಿಕ್ಷಕರ ಸಂಘದ ವತಿಯಿಂದ ಬ್ಯಾರಿ ಭಾಷಾ ದಿನಾಚರಣೆ

ಬಂಟ್ವಾಳ : ಮಾತೃ ಭಾಷೆಯಲ್ಲಿ ಸಂವಹನ ಕಡಿಮೆಯಾದಾಗ ಮೂಲ ಪದಗಳು ಕಣ್ಮರೆಯಾಗಿ ಭಾಷಾ ಸಂರಚನೆಗೆ ಧಕ್ಕೆಯಾಗುತ್ತದೆ, ಆ ಮೂಲಕ ಭಾಷೆ ಅಳಿವಿನ ಹಾದಿ ಹಿಡಿಯುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯ ಶಿಕ್ಷಕರ ಸಂಘದ ಅಧ್ಯಕ್ಷ ಅಬ್ದುಲ್ ಮಜೀದ್ ಎಸ್. ಅಭಿಪ್ರಾಯಪಟ್ಟರು.

ಅವರು ಸಮನ್ವಯ ಶಿಕ್ಷಕರ ಸಂಘದ ವತಿಯಿಂದ ಗುರುವಾರ ಅಕ್ಟೋಬರ್ 3ರಂದು ಬ್ರಹ್ಮರಕೂಟ್ಲು ಸುಹಾ ನಿವಾಸದಲ್ಲಿ ನಡೆದ ಬ್ಯಾರಿ ಭಾಷಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಬ್ಯಾರಿ ಭಾಷೆಯ ವೈಶಿಷ್ಟ್ಯತೆಗಳ ಕುರಿತು ಮಾತನಾಡಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಆಯುಕ್ತ ಮೊಹಮ್ಮದ್ ತುಂಬೆ, ಬ್ಯಾರಿ ಭಾಷಾ ದಿನಾಚರಣೆಯ ಶುಭಾಶಯ ಕೋರಿದರು.

ಸಮಾರಂಭದಲ್ಲಿ ಸಮನ್ವಯ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ನಾಸೀರ್ ಅಡೆಕಲ್, ಮೊಹಮ್ಮದ್ ಕೊಲ್ಲರಕೋಡಿ, ಅಬ್ದುಲ್ ಹಮೀದ್ ಮಾಣಿ, ನೂರುದ್ದೀನ್ ಅಕ್ಕರಂಗಡಿ, ಹೈದರ್ ಪಡಂಗಡಿ, ತಾಹಿರಾ ತುಂಬೆ, ಜಮೀಲಾ ತುಂಬೆ, ಲುಕ್ಮಾನ್ ವಿಟ್ಲ, ಶೇಖ್ ಆದಂ ಸಾಹೇಬ್ ನೆಲ್ಯಾಡಿ, ಹಸೀನಾ ಮಲ್ನಾಡ್ ಮೊದಲಾದವರು ಉಪಸ್ಥಿತರಿದ್ದರು.

ಜಿಲ್ಲಾ ಕಾರ್ಯದರ್ಶಿ ಹಾರೀಶ್ ಬಾಂಬಿಲ ಸ್ವಾಗತಿಸಿ, ಸಂಘದ ಬಂಟ್ವಾಳ ಘಟಕಾಧ್ಯಕ್ಷ ಮೊಹಮ್ಮದ್ ಮನಾಝಿರ್ ಮುಡಿಪು ವಂದಿಸಿದರು. ಶಿಕ್ಷಕ ಅಕ್ಬರ್ ಉಳಿಬೈಲು ಕಾರ್ಯಕ್ರಮ ನಿರೂಪಿಸಿದರು.

You may also like

News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC
News

ICYM BORIMAR ಸಂಘಟನೆಯಲ್ಲಿ ‘ಕುಟುಂಬ ರಾಜಕಾರಣ’?: ಯಾರಿಗೂ ತಿಳಿಸದೇ ಒಳಗಿಂದೊಳಗೆ ಚುನಾವಣೆ ನಡೆಸಿದ ಸಚೇತಕ! ಭುಗಿಲೆದ್ದ ಆಕ್ರೋಶ

ಮಂಗಳೂರು ಧರ್ಮಾಧ್ಯಕ್ಷರಿಗೆ ಲಿಖಿತ ದೂರು ನೀಡಿದ ಚರ್ಚ್ ಹಿಂದಿನ ಪಾಲನಾ ಸಮಿತಿ ಕ್ರೈಸ್ತ ಯುವಜನರ ಪ್ರತಿಷ್ಠಿತ ಸಂಘಟನೆಯಾದ ICYM ಬೊರಿಮಾರ್ (BORIMAR) ಘಟಕದಲ್ಲಿ ಸಚೇತಕನು (ANIMATOR) ಧರ್ಮಕ್ಷೇತ್ರದ

You cannot copy content of this page