January 18, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಾರಾಯಣಗುರುಗಳು ಸಾತ್ವಿಕ ಚಿತ್ತದ ಸಮಾಜ ಸುಧಾರಕರು : ಪ್ರೇಮನಾಥ್ ಕರ್ಕೇರಾ

ಬಂಟ್ವಾಳ : ಅಹಿಂಸಾ ತತ್ವವನ್ನು ಪಾಲಿಸಲು ಪ್ರೇರಕರಾಗಿ, ಅಸ್ಪೃಶ್ಯತೆ ನಿವಾರಣೆಗೆ ಹೋರಾಡುತ್ತಾ, ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು ಎಂದು ಜಗತ್ತಿಗೆ ಸಾರಿದ ಗುರುಗಳು, ಓರ್ವ ಸಾತ್ವಿಕ ಚಿತ್ತದ ಸುಧಾರಕರು ಎಂದು ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಪ್ರೇಮನಾಥ್ ಕರ್ಕೇರಾ ತಿಳಿಸಿದರು. ಗುರುವಾರ ಅಕ್ಟೋಬರ್ 3ರಂದು ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ಸದಾನಂದ ಎನ್. ಪೂಜಾರಿ ಇವರ ಮನೆಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ 14ನೇ ಮಾಲಿಕೆಯಲ್ಲಿ ಗುರುಗಳ ಸಂದೇಶಗಳನ್ನು ನೀಡಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ, ಆರೋಗ್ಯ ನಿರ್ದೇಶಕ ಮಹೇಶ್ ಬೊಳ್ಳಾಯಿ, ಮಾಜಿ ಅಧ್ಯಕ್ಷರಾದ ರಾಮಚಂದ್ರ ಸುವರ್ಣ, ನಾಗೇಶ್ ಪೊನ್ನೋಡಿ, ಶಿವಾನಂದ ಎಂ., ಅರುಣ್ ಬಿ.ಸಿ. ರೋಡ್, ಸದಸ್ಯರಾದ ನಾಗೇಶ್ ಪೂಜಾರಿ ಏಲಬೆ, ಯತೀಶ್ ಬೊಳ್ಳಾಯಿ, ಹರೀಶ್ ಅಜೆಕಲ, ರತ್ನಾಕರ್ ಸಿದ್ಧಕಟ್ಟೆ, ಅರ್ಜುನ್ ಅರಳ, ಯಶೋಧರ ಕಡಂಬಲ್ಕೆ, ಶೇಖರ್ ಕಲ್ಯಾಣಾಗ್ರಹಾರ, ರಾಕೇಶ್ ಜತ್ತನ್ ರಾಯಿ, ಯೋಗೀಶ್ ಕರ್ಪೆ ಮತ್ತಿತರರು ಉಪಸ್ಥಿತರಿದ್ದರು.

 

ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿ ವಂದಿಸಿದರು.

 

You may also like

News

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ
News

ಬಹ್ರೇನ್ನಲ್ಲಿ 71 ಕೋಟಿ ರೂಪಾಯಿ ಲಾಟರಿ ಗೆದ್ದ ಕೇರಳ ಮೂಲದ ನರ್ಸ್ ಮನು  ಮೋಹನನ್

ಬಹ್ರೇನ್ನಲ್ಲಿ ನರ್ಸಿಂಗ್ ಕೆಲಸ ಮಾಡುತ್ತಿರುವ ಕೇರಳದ 36 ವರ್ಷದ ಆಂಬ್ಯುಲೆನ್ಸ್ ನರ್ಸ್ ಮನು ಮೋಹನನ್ ಇವರಿಗೆ ಬಿಗ್ ಟಿಕೆಟ್ ಲಾಟರಿಯಲ್ಲಿ 71 ಕೋಟಿ ರೂಪಾಯಿ (30 ಮಿಲಿಯನ್

You cannot copy content of this page