May 9, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೆಲ ಖಾಸಗಿ ಶಾಲೆಗಳಿಗೆ ಮಧ್ಯಂತರ ರಜೆ ಇನ್ನೂ ನೀಡಿಲ್ಲ ಪೋಷಕರ ಆಕ್ರೋಶ

ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಅಕ್ಟೋಬರ್ 3ರ ಗುರುವಾರದಿಂದ ಶಾಲಾ ಮಕ್ಕಳಿಗೆ ಮಧ್ಯಂತರ ರಜೆ ಆರಂಭವಾಗಬೇಕಿದ್ದರೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಕೆಲವು ಖಾಸಗಿ ಶಾಲೆಗಳು ಇನ್ನೂ ರಜೆ ನೀಡಿಲ್ಲ.

ಶಿಕ್ಷಣ ಇಲಾಖೆಯ ಶೈಕ್ಷಣಿಕ ವೇಳಾಪಟ್ಟಿ ಅನುಸಾರ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳಲ್ಲಿ ಶಿಕ್ಷಕರು ಬುಧವಾರ ಗಾಂಧಿ ಜಯಂತಿ ಕಾರ್ಯಕ್ರಮದ ಬಳಿಕ ಮಕ್ಕಳಿಗೆ ಮಧ್ಯಂತರ ರಜೆಯ ಮಾಹಿತಿ ನೀಡಿ ಕಳಹಿಸಲಾಗಿದೆ. ಆದರೆ, ಕೆಲವು ಖಾಸಗಿ ಶಾಲೆಗಳಲ್ಲಿ ಮಾತ್ರ ಇನ್ನೂ ರಜೆ ನೀಡಿಲ್ಲ.

ವೇಳಾಪಟ್ಟಿ ಪ್ರಕಾರ ಇಷ್ಟೊತ್ತಿಗೆ ಪೂರ್ಣಗೊಳಿಸಬೇಕಿದ್ದ ಅರ್ಧವಾರ್ಷಿಕ ಪರೀಕ್ಷೆಯನ್ನು ಇನ್ನೂ ನಡೆಸುತ್ತಿರುವ ಖಾಸಗಿ ಶಾಲೆಗಳು, ಮುಂದಿನ ವಾರದಿಂದ ತಮ್ಮ ಶಾಲೆಯ ಮಕ್ಕಳಿಗೆ ರಜೆ ನೀಡುವುದಾಗಿ ಹೇಳಿವೆ. ಇದು ಪೋಷಕರ ವಲಯದಲ್ಲಿ ಬಹಳ ಆಕ್ರೋಶಕ್ಕೆ ಕಾರಣವಾಗಿದೆ. ನಿಯಮ ಪ್ರಕಾರ ಅಕ್ಟೋಬರ್ 3ರಿಂದ 20ರವರೆಗೆ 18 ದಿನ ರಜೆ ನೀಡಬೇಕು.

ಆದರೆ, ಒಂದು ವಾರ ತಡ ಮಾಡಿದರೆ ಮಕ್ಕಳಿಗೆ ರಜೆ ಅವಧಿ ಕಡಿತವಾಗಲಿದೆ. ಶೈಕ್ಷಣಿಕ ವರ್ಷದ ಮಧ್ಯೆ ಕೆಲವು ದಿನ ಕುಟುಂಬದೊಂದಿಗೆ ಪೂರ್ಣಾವಧಿ ಕಾಲ ಕಳೆಯುವುದು, ಪ್ರವಾಸ, ಸಂಬಂಧಿಕರ ಮನೆಗೆ ಬೇಟಿ ಸೇರಿದಂತೆ ಮತ್ತಿತರೆ ಅವಕಾಶಗಳಿಗೆ ಸಮಯ ಸಿಗದಂತಾಗಲಿದೆ ಎಂಬುದು ಪೋಷಕರ ವಲಯದ ಅಸಮಾಧಾನವಾಗಿದೆ. ಶಿಕ್ಷಣ ಇಲಾಖೆ ಕೂಡಲೇ ಎಚ್ಚೆತ್ತುಕೊಳ್ಳಬೇಕಾಗಿ ಪೋಷಕರ ಮನವಿಯಾಗಿದೆ.

You may also like

News

ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಪ್ರೆವೋಸ್ಟ್ ಹೊಸ ಪೋಪ್ ‘ಲಿಯೋ XIV’ ಆಗಿ ಆಯ್ಕೆ

ಕ್ಯಾಥೋಲಿಕ್ ಚರ್ಚ್‌ಗೆ ಐತಿಹಾಸಿಕ ಮತ್ತು ಸಂತೋಷದಾಯಕ ಕ್ಷಣದಲ್ಲಿ ಚಿಕಾಗೋದಲ್ಲಿ ಜನಿಸಿದ ಮಿಷನ್ ಮತ್ತು ಸೇವೆಗೆ ಆಳವಾದ ಬದ್ಧತೆಯನ್ನು ಹೊಂದಿರುವ 69 ವರ್ಷ ವಯಸ್ಸಿನ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್
News

ನೂತನ ಯಾಜಕ ಸ್ಟ್ಯಾನಿ ಪಿಂಟೊ ಇವರ ಪ್ರಥಮ ಕೃತಜ್ಞತಾ ದಿವ್ಯ ಬಲಿಪೂಜೆ

ಕಾರ್ಮೆಲೈಟ್ ಸಂಸ್ಥೆಗೆ ಸೂರಿಕುಮೇರು ಬೊರಿಮಾರ್ ಚರ್ಚ್ ನಿಂದ ಪ್ರಥಮ ಯಾಜಕ ಚರ್ಚ್ ಉಪಾಧ್ಯಕ್ಷ, ಕಾರ್ಯದರ್ಶಿ ಹಾಗೂ ಆಯೋಗಗಳ ಸಂಯೋಜಕರಿಂದ ಅಭಿನಂದನೆ ಮಂಗಳೂರಿನ ಬಿಕರ್ನಕಟ್ಟೆಯಲ್ಲಿರುವ ಬಾಲಯೇಸು ಪುಣ್ಯ ಕ್ಷೇತ್ರದಲ್ಲಿ

You cannot copy content of this page