February 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗ್ರಾಮ ಪಂಚಾಯತ್ ಪಿಡಿಓ ನೋಟಿಸಿಗೆ ಹೈಕೋರ್ಟ್ ತಡೆ – ಫಲಭರಿತ ತೆಂಗಿನ ಮರ ಕಡಿಯದಂತೆ ಆದೇಶ

ಬಂಟ್ವಾಳ : ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾರಿಪಳ್ಳ ಎಂಬಲ್ಲಿ ಫ್ರಾನ್ಸಿಸ್ ವಾಸ್ ಎಂಬವರಿಗೆ ಸೇರಿದ್ದ ಫಲಭರಿತ ತೆಂಗಿನಮರವನ್ನು ಕಡಿಯುವಂತೆ ಪುದು ಗ್ರಾಮ ಪಂಚಾಯತ್ ಪಿಡಿಓ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ. ಅದೇ ಪಂಚಾಯತಿನ ಪ್ರಭಾವಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಸರಿಯಾಗಿ ಪರಿಶೀಲಿಸದೆ ಸಮೃದ್ಧ ಫಲಭರಿತ ತೆಂಗಿನ ಮರವನ್ನು ತಕ್ಷಣ ಕಡಿಯುವಂತೆ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಯವರ ಸೂಚನೆಯಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಾಸ್ ರವರಿಗೆ ನೋಟಿಸ್ ನೀಡಿದ್ದರು.

ಸದ್ರಿ ನೋಟಿಸನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಫ್ರಾನ್ಸಿಸ್ ವಾಸ್ ರವರ ಅರ್ಜಿಯನ್ನು ಬುಧವಾರ ವಿಚಾರಿಸಿದ ಜಸ್ಟಿಸ್ ಮಹಮ್ಮದ್ ನವಾಝ್ ರವರ ಪೀಠವು ಅರ್ಜಿಯನ್ನು ಪರಿಶೀಲಿಸಿ ಮರ ಕಡಿಯದಂತೆ ತಡೆಯಾಜ್ಞೆ ನೀಡಿದೆ. ಅರ್ಜಿದಾರರ ಪರವಾಗಿ ಬೆಂಗಳೂರಿನ ಆರ್. ಪಿ. ಡಿಸೋಜಾ ಅಸೋಸಿಯೇಟ್ಸ್ ನ ಯುವ ವಕೀಲ ಆರ್. ಪಿ. ಡಿಸೋಜಾರವರು ವಾದ ಮಂಡಿಸಿದರು.

You may also like

News

ಪ್ರಸಿದ್ದ ಚಲನಚಿತ್ರ ನಟ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್ ರೈ ಮಾಣಿ ಇವರ ಮಗಳು ವೆನ್ಯ ರೈ ನಾಯಕಿಯಾಗಿ ನಟಿಸಿದ ‘ಆರಾಟ’ ಕನ್ನಡ ಸಿನಿಮಾ 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗೆ ಆಯ್ಕೆ

ಬೆಂಗಳೂರಿನಲ್ಲಿ ಮಾರ್ಚ್ 1ರಿಂದ 8ರ ತನಕ ನಡೆಯಲಿರುವ 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗೆ ಪ್ರಸಿದ್ದ ಚಲನಚಿತ್ರ ನಟ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್
News

 ಗೆಳೆಯರ ಬಳಗ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮ

ಗೆಳೆಯರ ಬಳಗ ಅಕ್ಷಯನಗರ (ರಿ.) ನಿಡಿಗಲ್ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮವು ಫೆಬ್ರವರಿ 9ರಂದು ಆದಿತ್ಯವಾರ ಕಲ್ಮಂಜ ಗ್ರಾಮದ ಅಕ್ಷಯನಗರದ ಕ್ರೀಡಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು.

You cannot copy content of this page