May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗ್ರಾಮ ಪಂಚಾಯತ್ ಪಿಡಿಓ ನೋಟಿಸಿಗೆ ಹೈಕೋರ್ಟ್ ತಡೆ – ಫಲಭರಿತ ತೆಂಗಿನ ಮರ ಕಡಿಯದಂತೆ ಆದೇಶ

ಬಂಟ್ವಾಳ : ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾರಿಪಳ್ಳ ಎಂಬಲ್ಲಿ ಫ್ರಾನ್ಸಿಸ್ ವಾಸ್ ಎಂಬವರಿಗೆ ಸೇರಿದ್ದ ಫಲಭರಿತ ತೆಂಗಿನಮರವನ್ನು ಕಡಿಯುವಂತೆ ಪುದು ಗ್ರಾಮ ಪಂಚಾಯತ್ ಪಿಡಿಓ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ. ಅದೇ ಪಂಚಾಯತಿನ ಪ್ರಭಾವಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಸರಿಯಾಗಿ ಪರಿಶೀಲಿಸದೆ ಸಮೃದ್ಧ ಫಲಭರಿತ ತೆಂಗಿನ ಮರವನ್ನು ತಕ್ಷಣ ಕಡಿಯುವಂತೆ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಯವರ ಸೂಚನೆಯಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಾಸ್ ರವರಿಗೆ ನೋಟಿಸ್ ನೀಡಿದ್ದರು.

ಸದ್ರಿ ನೋಟಿಸನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಫ್ರಾನ್ಸಿಸ್ ವಾಸ್ ರವರ ಅರ್ಜಿಯನ್ನು ಬುಧವಾರ ವಿಚಾರಿಸಿದ ಜಸ್ಟಿಸ್ ಮಹಮ್ಮದ್ ನವಾಝ್ ರವರ ಪೀಠವು ಅರ್ಜಿಯನ್ನು ಪರಿಶೀಲಿಸಿ ಮರ ಕಡಿಯದಂತೆ ತಡೆಯಾಜ್ಞೆ ನೀಡಿದೆ. ಅರ್ಜಿದಾರರ ಪರವಾಗಿ ಬೆಂಗಳೂರಿನ ಆರ್. ಪಿ. ಡಿಸೋಜಾ ಅಸೋಸಿಯೇಟ್ಸ್ ನ ಯುವ ವಕೀಲ ಆರ್. ಪಿ. ಡಿಸೋಜಾರವರು ವಾದ ಮಂಡಿಸಿದರು.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page