August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಾಮಂಜೂರು ಗ್ರಾಮಾಂತರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಕಥೊಲಿಕ್ ಸಭಾ ಅಧ್ಯಕ್ಷರ ಹಲ್ಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳ ಬಂಧನ

ಮಂಗಳೂರು : ಪಾವೂರು ಉಳಿಯ ಬಳಿ ಮರಳು ಮಾಫಿಯಾ ಕುರಿತು ವೀಕ್ಷಣೆಗೆ ತೆರಳಿದ್ದ ಕಥೊಲಿಕ್ ಸಭಾ ಸಂಘಟನೆಯ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಜೆರೊಮ್ ಡಿಸೋಜ ಪಾನೀರ್ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕು ಫರಂಗಿಪೇಟೆ ಪುದು ಗ್ರಾಮದ ಮೊಹಮ್ಮದ್ ಅತಾವುಲ್ಲ (40) ಮತ್ತು ಮಾರ್ನಮಿಕಟ್ಟೆ ಶಮಾ ಅಪಾರ್ಟ್ ಮೆಂಟ್ ನ್ ತೌಸ್ರ್‍ ಆಲಿಯಾಸ್ ಪತ್ತೊಂಜಿ ತೌಚಿ (31) ಬಂಧಿತ ಆರೋಪಿಗಳು. ಇವರ ಪೈಕಿ ಅತಾವುಲ್ಲಾನು ಘಟನೆಯ ಸಮಯದಲ್ಲಿ ಆಲ್ವಿನ್ ಅವರನ್ನು ಅವ್ಯಾಚ್ಯವಾಗಿ ನಿಂದಿಸಿ ಹಲ್ಲೆಗೆ ಪ್ರಚೋದನೆ ನೀಡಿದ್ದ ಹಾಗೂ ಆರೋಪಿ ತೌಸಿರ್ ಹಲ್ಲೆ ಮಾಡಿದ್ದ.

ಅಕ್ಟೋಬರ್ 5ರಂದು ಆಲ್ವಿನ್ ಅವರಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಿಗಳಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

 

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page