May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೊಕ್ಕಡ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ “ಗಾದ್ಯಾಂತ್ ಏಕ್ ದೀಸ್” ಕಾರ್ಯಕ್ರಮ ಆಚರಣೆ

ಕೊಕ್ಕಡ : ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ಐಸಿವೈಯಂ ಕೊಕ್ಕಡ ಘಟಕದ ವತಿಯಿಂದ “ಗಾದ್ಯಾಂತ್ ಏಕ್ ದೀಸ್” ಕಾರ್ಯಕ್ರಮವು ನಡೆಯಿತು. ಬಾಲಯೇಸು ಚರ್ಚ್ ನೆಲ್ಯಾಡಿ ಇಲ್ಲಿಯ ಧರ್ಮಗುರು ವಂದನೀಯ ಫಾದರ್ ಗ್ರೇಶಿಯನ್ ಆಲ್ವಾರಿಸ್ ಇವರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕೊಕ್ಕಡ ಚರ್ಚ್ ಧರ್ಮಗುರು ವಂದನೀಯ ಫಾದರ್ ಅನಿಲ್ ಪ್ರಕಾಶ್ ಡಿಸಿಲ್ವಾ ಅಧ್ಯಕ್ಷತೆಯನ್ನು ವಹಿಸಿದ್ದರು.

ದೇವಾಲಯದ ಆರು ವಾಳೆಯ ಸದಸ್ಯರು ನಡೆಸಿದ ಪಥ ಸಂಚಲನವು ಎಲ್ಲರನ್ನು ಆಕರ್ಷಿಸಿತ್ತು. ಪ್ರಾರ್ಥನೆಯನ್ನು ಐಸಿವೈಯಂ ಸದಸ್ಯರು ನಡೆಸಿಕೊಟ್ಟರು.

ವೇದಿಕೆಯಲ್ಲಿ ಭಗಿನಿ ಸ್ಟ್ರೆಲ್ಲಾ, ಭಗಿನಿ ಜಾಕಲಿನ್, ಚರ್ಚ್ ಉಪಾಧ್ಯಕ್ಷ ನೋಯೆಲ್ ಮೊಂತೇರೊ, ಕಾರ್ಯದರ್ಶಿ ವೀಣಾ ಮಸ್ಕರೇನ್ಹಸ್, ಆಯೋಗಗಳ ಸಂಚಾಲಕಿ ವಿನ್ನಿಫ್ರೆಡ್ ಡಿಸೋಜ, ಐಸಿವೈಯಂ ಕೊಕ್ಕಡ ಘಟಕದ ಸಚೇತಕ ಜಯಂತ್ ಡಿಸೋಜ, ಅಧ್ಯಕ್ಷೆ ಸಹನಾ ಡಿಸೋಜ, ಕಾರ್ಯದರ್ಶಿ ವಿನೀತ್ ಮೊಂತೇರೊ ಕ್ರೀಡಾ ಕಾರ್ಯದರ್ಶಿ ಜಾನ್ಸನ್ ಪಾಯ್ಸ್, ನಿಕಟ ಪೂರ್ವ ಅಧ್ಯಕ್ಷ ಪ್ರದೀಪ್ ಡಿಸೋಜ ಉಪಸ್ಥಿತರಿದ್ದರು.

ಸಹನಾ ಡಿಸೋಜ ಸ್ವಾಗತಿಸಿ, ವಿನೀತ್ ಮೊಂತೇರೊ ವಂದಿಸಿದರು. ಸಭಾ ಕಾರ್ಯಕ್ರಮವನ್ನು ವಿಲ್ಸಿಟಾ ಮೊಂತೇರೊ ನಿರೂಪಿಸಿದರು. ಎಲ್ಲಾ ಸ್ಪರ್ಧೆಗಳನ್ನು ಐಸಿವೈಯಂ ಸಂಘಟನೆಯ ಮುಂದಾಳತ್ವದಲ್ಲಿ ನಡೆಯಿತು. ಕಾರ್ಯಕ್ರಮದ ಹಿತಚಿಂತಕರನ್ನು ಗುರುತಿಸಿ ಅವರ ಕೊಡುಗೆಗಾಗಿ ಗೌರವಿಸಲಾಯಿತು.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page