January 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನೇರಳಕಟ್ಟೆ ಸಮೀಪದ ಭಗವಂತ ಕೋಡಿಯಲ್ಲಿ ಒಂದೇ ದಿನ ಇಬ್ಬರು ಮರಣ

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ನೇರಳಕಟ್ಟೆ ಸಮೀಪದ ಭಗವಂತಕೋಡಿ ಎದುರು – ಬದುರು ಮನೆಯ ನಿವಾಸಿಗಳಿಬ್ಬರು ಅಕ್ಟೋಬರ್ 10ರಂದು ಗುರುವಾರ ಬೆಳಗ್ಗೆ ಒಂದೇ ದಿನ ನಿಧನರಾದರು.

ಅಬ್ದುರ್ರಹ್ಮಾನ್ ಮೇಸ್ತ್ರಿ (54) ಅವರು ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರೆ ಅವರ ಮೃತದೇಹವನ್ನು ನೋಡಿ ಸ್ವಗೃಕ್ಕೆ ಬಂದ  ಎದುರು ಮನೆಯ ಹನೀಫ್ ಸಾಹೇಬ್ (65) ಹೃದಯಾಘಾತದಿಂದ ನಿಧನ ಹೊಂದಿದರು.

ಅಬ್ದುರ್ರಹ್ಮಾನ್ ಮೇಸ್ತ್ರಿ ಅವರು ಮೂಲತಃ ವಿಟ್ಲ ಸಮೀಪದ ಒಕ್ಕೆತ್ತೂರು – ಕೊಡಂಗೆ ನಿವಾಸಿಯಾಗಿದ್ದು ಇತ್ತೀಚೆಗೆ ಭಗವಂತಕೋಡಿಯಲ್ಲಿ ಮನೆ ಖರೀದಿಸಿ ವಾಸವಾಗಿದ್ದರು. ಅವರ ಮೃತ ಶರೀರ ಇದೀಗ ಭಗವಂತಕೋಡಿಯಲ್ಲಿದ್ದು ಸಂಜೆಯ ಬಳಿಕ ಒಕ್ಕೆತ್ತೂರು – ಕೊಡಂಗೆ ಮಸೀದಿ ಬಳಿ ದಫನ ಕಾರ್ಯ ನೆರವೇರಿಸಲಾಗುವುದು ಎಂದು ಕುಟುಂಬಿಕರು ತಿಳಿಸಿದ್ದಾರೆ. ಮೃತರು ಪತ್ನಿ, ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಹನೀಫ್ ಸಾಹೇಬ್ ಅವರು ಹಠಾತ್ ಹೃದಯಾಘಾತದಿಂದ ಮೃತಪಟ್ಟಿದ್ದು, ಮೃತರು ಪತ್ನಿ, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

You may also like

News

ಶಾಸಕಿ ಭಾಗೀರಥಿ ಮುರುಳ್ಯರ ಭಾವಚಿತ್ರ ಅವಹೇಳನ – ಬಿಜೆಪಿ ದಕ್ಷಿಣ ಕನ್ನಡದಿಂದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವುದನ್ನು ಖಂಡಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನಗರದ ಮಿನಿ ವಿಧಾನಸೌಧದ
News

ಸಂದೇಶ ಪ್ರಶಸ್ತಿಗಳು 2026 ಘೋಷಣೆ – ಜನವರಿ 21ರಂದು ಮಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ

ಮಂಗಳೂರಿನ ಪ್ರತಿಷ್ಠಿತ ಸಂಗೀತಗಾರ ಸೈಮನ್ ಪಾಯ್ಸ್ ಬಜಾಲ್ ಸೇರಿದಂತೆ ಹಲವು ಸಾಧಕರಿಗೆ ಪ್ರಶಸ್ತಿಗಳು ಮೌಲ್ಯಾಧಾರಿತ ಸಮಾಜ ನಿರ್ಮಾಣದ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನವು

You cannot copy content of this page