March 26, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನವಜಾತ ಶಿಶು ಮಾರಾಟ – ವೈದ್ಯೆ ಸೇರಿ 7 ಜನರ ಬಂಧನ

ಮಗುವಿಗೆ ಜನ್ಮ ನೀಡಿದ್ದ ತಾಯಿಯೊಬ್ಬರು, ತನ್ನ ಮಗುವನ್ನು ಸಾಕಲು ಆಗುವುದಿಲ್ಲ ಎಂಬ ಒಂದೇ ಕಾರಣಕ್ಕೆ ಹಸುಗೂಸನ್ನೇ ಮಾರಾಟ ಮಾಡಿರುವ ಮನಕಲಕುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. 8 ವರ್ಷಗಳ ಕಾಲ ಮಕ್ಕಳಾಗದೆ ಕೊರಗುತ್ತಿದ್ದ ದಂಪತಿ 5 ಲಕ್ಷ ರೂಪಾಯಿಗೆ ಮಗುವನ್ನು ಖರೀದಿ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಮಗು ಕೊಟ್ಟವರು, ಮಗು ಖರೀದಿ ಮಾಡಿದವರು, ಮಧ್ಯವರ್ತಿಗಳು, ವೈದ್ಯೆ ಸೇರಿ ಒಟ್ಟು ಏಳು ಜನರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನದಲ್ಲಿ ಇರಿಸಿದ್ದಾರೆ.

ವೈದ್ಯೆ ಡಾ. ಭಾರತಿ, ಶಿಶುವಿನ ತಾಯಿ ಕಾವ್ಯ, ಶಿಶು ಖರೀದಿಸಿದ್ದ ಜಯಾ ಹಾಗೂ ಪ್ರಶಾಂತ್‌ ಕುಮಾರ್‌ ದಂಪತಿ, ಮಧ್ಯವರ್ತಿಗಳಾದ ವಾದಿರಾಜ್‌, ಮಂಜಮ್ಮ ಬಂಧಿತರು. ನಕಲಿ ದಾಖಲೆಗಳನ್ನು ಸೃಷ್ಟಿಸಿ ನವಜಾತ ಶಿಶುವೊಂದನ್ನು ರೂಪಾಯಿ 5 ಲಕ್ಷಕ್ಕೆ ಮಾರಾಟ ಮಾಡಲಾಗಿದ್ದು, ಪ್ರಕರಣ ಸಂಬಂಧ ದಾವಣಗೆರೆಯ ಮೆಮೋರಿಯಲ್ ಆಸ್ಪತ್ರೆಯ ವೈದ್ಯೆ ಡಾ. ‌ಭಾರತಿ ಸೇರಿ 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಮಾಹಿತಿ ನೀಡಿದ್ದಾರೆ.

ಆಗಸ್ಟ್ 26ರಂದು ಮಗುವಿನ ತಾಯಿ ಕಾವ್ಯ ಅವರು ತಮಗೆ ಈಗಾಗಲೇ ಇಬ್ಬರು ಮಕ್ಕಳಿದ್ದು, ಈ ಮಗುವನ್ನು ಸಾಕಲು ಆಗುವುದಿಲ್ಲ ಎಂಬ ಸಬೂಬು ಹೇಳಿ ಮಾರಾಟ ಮಾಡಿದ್ದರು. ದಾವಣಗೆರೆ ದಂಪತಿ ಪ್ರಶಾಂತ ಕುಮಾರ್ ಹಾಗೂ ಜಯಾ ಎಂಬುವರು 5 ಲಕ್ಷ ಹಣ ನೀಡಿ ಮಗುವನ್ನು ಖರೀದಿಸಿದ್ದರು. ಮಗು ಮಾರಾಟಕ್ಕೆ ಟಿ. ವಾದಿರಾಜ್ ಹಾಗೂ ಮಂಜಮ್ಮ ಅಲಿಯಾಸ್ ಮಂಜುಳಾ ಎಂಬ ದಂಪತಿ ಮಧ್ಯವರ್ತಿಗಳಾಗಿ ಕೆಲಸ ಮಾಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಸುಗೂಸಿನ ಮುಖ ನೋಡದೇ ಕಾವ್ಯ ಅವರು ಮಗು ಮಾರಾಟ ಮಾಡಿದ್ದರು. ಬಳಿಕ ಎಂ.ಕೆ. ಮೆಮೋರಿಯಲ್ ಆಸ್ಪತ್ರೆಯಲ್ಲಿ ಮಗು ಜನಿಸಿದ್ದು, ಈ ಮಗು ಪ್ರಶಾಂತ್ ಕುಮಾರ್ ಮತ್ತು ಜಯಾ ಅವರಿಗೆ ಜನಿಸಿದೆ ಎಂದು ಆರೋಪಿಗಳು ನಕಲಿ ದಾಖಲೆ ಸೃಷ್ಟಿಸಿದ್ದರು. ನಕಲಿ ದಾಖಲೆಗಳನ್ನು ನೀಡಿದ ಆರೋಪಿಗಳು ಮಹಾನಗರ ಪಾಲಿಕೆಯಲ್ಲಿ ಮಗುವಿನ ಜನನ ಪ್ರಮಾಣಪತ್ರ ಪಡೆದಿದ್ದರು‌. ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಪ್ರಕರಣದ ಬಗ್ಗೆ ವಿವರಿಸಿದರು.

You may also like

News

ದಲಿತ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಕೆ ಡಿಎಚ್ಎಸ್ ಒತ್ತಾಯ – ಕಠಿಣ ಕ್ರಮಕ್ಕೆ ಆಗ್ರಹ

ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬವನು ನಿರಂತರ ಲೈಂಗಿಕ ಕಿರುಕುಳ ನೀಡುವ ಮೂಲಕ ಮಾನಸಿಕ
News

ನೇತ್ರದಾನದಿಂದ ಇನ್ನೊಬ್ಬರ ಬಾಳಿಗೆ ಬೆಳಕು – ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ

ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು. ದಕ್ಷಿಣ ಕನ್ನಡ

You cannot copy content of this page