May 9, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶ್ರೀ ಮಹಾಭಾರತ ಸರಣಿಯ 50 ನೇ ತಾಳಮದ್ದಳೆ ಅಭಿಮನ್ಯು ಕಾಳಗ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘವು 50ನೇ ವರ್ಷಾಚರಣೆ ನಿಮಿತ್ತ ನಡೆಸುತ್ತಿರುವ ಮಹಾಭಾರತ ಸರಣಿಯ 100 ತಾಳಮದ್ದಳೆಗಳಲ್ಲಿ 50ನೇ ತಾಳಮದ್ದಳೆಯು ಉಪ್ಪಿನಂಗಡಿ ಸಾರ್ವಜನಿಕ ಶ್ರೀ ಶಾರದೋತ್ಸವ ಪ್ರಯುಕ್ತ ರಾಮನಗರದ ಶ್ರೀ ಶಾರದಾ ಕಲಾಮಂಟಪದಲ್ಲಿ ಜರಗಿತು.

 ಶ್ರೀ ಶಾರದೋತ್ಸವ ಸಮಿತಿಯ ಪ್ರಾಯೋಜಕತ್ವದಲ್ಲಿ ನಡೆದ ಅಭಿಮನ್ಯು ಕಾಳಗದಲ್ಲಿ ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ಡಿ.ಕೆ. ಆಚಾರ್ಯ ಅಲಂಕಾರು, ಸುರೇಶ್ ರಾವ್ ಬನ್ನೆಂಗಳ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ ಬಾರ್ಯ ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ಗೇರುಕಟ್ಟೆ (ಸುಭದ್ರೆ) ಸತೀಶ್ ಆಚಾರ್ಯ ಮಾಣಿ (ದ್ರೋಣ) ಗುಡ್ಡಪ್ಪ ಗೌಡ ಬಲ್ಯ, ಹರೀಶ ಆಚಾರ್ಯ ಬಾರ್ಯ (ಅಭಿಮನ್ಯು) ಮಹಾಲಿಂಗೇಶ್ವರ ಭಟ್ ಪೆರಿಯಡ್ಕ (ಕರ್ಣ) ಜಯರಾಮಗೌಡ ಬಲ್ಯ (ದುಶ್ಯಾಸನ, ಜಯದ್ರಥ) ಜಿನೇಂದ್ರ ಜೈನ್ ಬಳ್ಳಮಂಜ (ಕೌರವ) ದಿವಾಕರ ಆಚಾರ್ಯ ನೇರೆಂಕಿ (ಗಯಾಯುಧ) ಸಂಜೀವ ಪಾರೆಂಕಿ(ಧರ್ಮರಾಯ) ಹರಿಕಿರಣ್ ಕೊಯ್ಲ (ಭೀಮ) ಭಾಗವಹಿಸಿದ್ದರು.

ರಾಮನಗರದ  ಸೌಹಾರ್ದ ಯಕ್ಷಗಾನ ಸಮಿತಿ ವತಿಯಿಂದ ಕಲಾವಿದ ಗುಡ್ಡಪ್ಪ ಬಲ್ಯರನ್ನು ಸನ್ಮಾನಿಸಲಾಯಿತು. ಶ್ರೀ ಶಾರದೋತ್ಸವ ಸಮಿತಿಯ ಗೌರವಾಧ್ಯಕ್ಷ ಉಮೇಶ್ ಶೆಣೈ ಎನ್. ಕಾರ್ಯಾಧ್ಯಕ್ಷ ರಾಮಚಂದ್ರ ಮಣಿಯಾಣಿ, ಅಧ್ಯಕ್ಷ ಚಂದ್ರಶೇಖರ ಮಡಿವಾಳ, ಖಜಾಂಜಿ ವಿಶ್ವನಾಥ ಶೆಟ್ಟಿ ಕಂಗ್ವೆ ತಾಳಮದ್ದಳೆಯ ಕಲಾವಿದರನ್ನು ಗೌರವಿಸಿದರು. ಈ ಮೂಲಕ 50ನೇ ಕಾರ್ಯಕ್ರಮವು ವಿಶಿಷ್ಟವಾಗಿ ಜರಗಿತು. ಸಂಘದ ಕಾರ್ಯದರ್ಶಿ ಶ್ರೀಪತಿ ಭಟ್ ಸ್ವಾಗತಿಸಿ ಸಮಿತಿಯ ಪದಾಧಿಕಾರಿ ಜಯಂತ ಪುರೋಳಿ ವಂದಿಸಿದರು.

You may also like

News

ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಪ್ರೆವೋಸ್ಟ್ ಹೊಸ ಪೋಪ್ ‘ಲಿಯೋ XIV’ ಆಗಿ ಆಯ್ಕೆ

ಕ್ಯಾಥೋಲಿಕ್ ಚರ್ಚ್‌ಗೆ ಐತಿಹಾಸಿಕ ಮತ್ತು ಸಂತೋಷದಾಯಕ ಕ್ಷಣದಲ್ಲಿ ಚಿಕಾಗೋದಲ್ಲಿ ಜನಿಸಿದ ಮಿಷನ್ ಮತ್ತು ಸೇವೆಗೆ ಆಳವಾದ ಬದ್ಧತೆಯನ್ನು ಹೊಂದಿರುವ 69 ವರ್ಷ ವಯಸ್ಸಿನ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್
News

ನೂತನ ಯಾಜಕ ಸ್ಟ್ಯಾನಿ ಪಿಂಟೊ ಇವರ ಪ್ರಥಮ ಕೃತಜ್ಞತಾ ದಿವ್ಯ ಬಲಿಪೂಜೆ

ಕಾರ್ಮೆಲೈಟ್ ಸಂಸ್ಥೆಗೆ ಸೂರಿಕುಮೇರು ಬೊರಿಮಾರ್ ಚರ್ಚ್ ನಿಂದ ಪ್ರಥಮ ಯಾಜಕ ಚರ್ಚ್ ಉಪಾಧ್ಯಕ್ಷ, ಕಾರ್ಯದರ್ಶಿ ಹಾಗೂ ಆಯೋಗಗಳ ಸಂಯೋಜಕರಿಂದ ಅಭಿನಂದನೆ ಮಂಗಳೂರಿನ ಬಿಕರ್ನಕಟ್ಟೆಯಲ್ಲಿರುವ ಬಾಲಯೇಸು ಪುಣ್ಯ ಕ್ಷೇತ್ರದಲ್ಲಿ

You cannot copy content of this page