May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶ್ರೀ ಮಹಾಭಾರತ ಸರಣಿಯ 50 ನೇ ತಾಳಮದ್ದಳೆ ಅಭಿಮನ್ಯು ಕಾಳಗ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘವು 50ನೇ ವರ್ಷಾಚರಣೆ ನಿಮಿತ್ತ ನಡೆಸುತ್ತಿರುವ ಮಹಾಭಾರತ ಸರಣಿಯ 100 ತಾಳಮದ್ದಳೆಗಳಲ್ಲಿ 50ನೇ ತಾಳಮದ್ದಳೆಯು ಉಪ್ಪಿನಂಗಡಿ ಸಾರ್ವಜನಿಕ ಶ್ರೀ ಶಾರದೋತ್ಸವ ಪ್ರಯುಕ್ತ ರಾಮನಗರದ ಶ್ರೀ ಶಾರದಾ ಕಲಾಮಂಟಪದಲ್ಲಿ ಜರಗಿತು.

 ಶ್ರೀ ಶಾರದೋತ್ಸವ ಸಮಿತಿಯ ಪ್ರಾಯೋಜಕತ್ವದಲ್ಲಿ ನಡೆದ ಅಭಿಮನ್ಯು ಕಾಳಗದಲ್ಲಿ ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ಡಿ.ಕೆ. ಆಚಾರ್ಯ ಅಲಂಕಾರು, ಸುರೇಶ್ ರಾವ್ ಬನ್ನೆಂಗಳ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ ಬಾರ್ಯ ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ಗೇರುಕಟ್ಟೆ (ಸುಭದ್ರೆ) ಸತೀಶ್ ಆಚಾರ್ಯ ಮಾಣಿ (ದ್ರೋಣ) ಗುಡ್ಡಪ್ಪ ಗೌಡ ಬಲ್ಯ, ಹರೀಶ ಆಚಾರ್ಯ ಬಾರ್ಯ (ಅಭಿಮನ್ಯು) ಮಹಾಲಿಂಗೇಶ್ವರ ಭಟ್ ಪೆರಿಯಡ್ಕ (ಕರ್ಣ) ಜಯರಾಮಗೌಡ ಬಲ್ಯ (ದುಶ್ಯಾಸನ, ಜಯದ್ರಥ) ಜಿನೇಂದ್ರ ಜೈನ್ ಬಳ್ಳಮಂಜ (ಕೌರವ) ದಿವಾಕರ ಆಚಾರ್ಯ ನೇರೆಂಕಿ (ಗಯಾಯುಧ) ಸಂಜೀವ ಪಾರೆಂಕಿ(ಧರ್ಮರಾಯ) ಹರಿಕಿರಣ್ ಕೊಯ್ಲ (ಭೀಮ) ಭಾಗವಹಿಸಿದ್ದರು.

ರಾಮನಗರದ  ಸೌಹಾರ್ದ ಯಕ್ಷಗಾನ ಸಮಿತಿ ವತಿಯಿಂದ ಕಲಾವಿದ ಗುಡ್ಡಪ್ಪ ಬಲ್ಯರನ್ನು ಸನ್ಮಾನಿಸಲಾಯಿತು. ಶ್ರೀ ಶಾರದೋತ್ಸವ ಸಮಿತಿಯ ಗೌರವಾಧ್ಯಕ್ಷ ಉಮೇಶ್ ಶೆಣೈ ಎನ್. ಕಾರ್ಯಾಧ್ಯಕ್ಷ ರಾಮಚಂದ್ರ ಮಣಿಯಾಣಿ, ಅಧ್ಯಕ್ಷ ಚಂದ್ರಶೇಖರ ಮಡಿವಾಳ, ಖಜಾಂಜಿ ವಿಶ್ವನಾಥ ಶೆಟ್ಟಿ ಕಂಗ್ವೆ ತಾಳಮದ್ದಳೆಯ ಕಲಾವಿದರನ್ನು ಗೌರವಿಸಿದರು. ಈ ಮೂಲಕ 50ನೇ ಕಾರ್ಯಕ್ರಮವು ವಿಶಿಷ್ಟವಾಗಿ ಜರಗಿತು. ಸಂಘದ ಕಾರ್ಯದರ್ಶಿ ಶ್ರೀಪತಿ ಭಟ್ ಸ್ವಾಗತಿಸಿ ಸಮಿತಿಯ ಪದಾಧಿಕಾರಿ ಜಯಂತ ಪುರೋಳಿ ವಂದಿಸಿದರು.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page