February 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕ್ಯಾನ್ಸರ್ ಪೀಡಿತರಿಗಾಗಿ  ಕೇಶದಾನಗೈದ  ವಿದ್ಯಾರ್ಥಿನಿ ಚಿರಣ್ಯ ಆರ್. ಪೂಜಾರಿ

ಕಲ್ಲಡ್ಕ : ಬಂಟ್ವಾಳ ತಾಲೂಕಿನ ವೀರಕಂಭ  ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಚಿರಣ್ಯ ಆರ್. ಪೂಜಾರಿ ಟೀಂ ಸೇವಾಪಥದ ಮೂಲಕ ಕ್ಯಾನ್ಸರ್ ಪೀಡಿತರಿಗಾಗಿ ತನ್ನ ಕೇಶ ದಾನಗೈದು ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ.

ಚಿರಣ್ಯ ಆರ್. ಪೂಜಾರಿ ವೀರಕಂಭ ಗ್ರಾಮದ ಗಣೇಶಕೋಡಿಯ ರಾಮಚಂದ್ರ ರೇಖಾ ದಂಪತಿಗಳ ಪುತ್ರಿಯಾಗಿದ್ದು, ತನ್ನ ಮಗಳನ್ನು ಕೇಶದಾನಗೈಯಲು ಪ್ರೇರಣೆ ನೀಡಿದ ರಾಮಚಂದ್ರರವರು ಆತ್ಮೀಯ ಮಿತ್ರರೆಲ್ಲರ ಸಹಕಾರದೊಂದಿಗೆ ಓಂ ಶ್ರೀ ಸಾಯಿಗಣೇಶ ಸೇವಾ ಸಂಘದ ಸಾರಥಿಯಾಗಿ ಅಶಕ್ತರಿಗೆ ನೆರವು ನೀಡುತ್ತಾ ಯುವಶಕ್ತಿ ಸೇವಾಪಥ, ಯುವಶಕ್ತಿ ರಕ್ತನಿಧಿಯ ಮೂಲಕ ಸಮಾಜ ಸೇವೆಗೆ ಸದಾ ಕೈ ಜೋಡಿಸುವ ಓರ್ವ ನಿಷ್ಠಾವಂತ ಕಾರ್ಯಕರ್ತರಾಗಿರುತ್ತಾರೆ. ಇವರ ಈ ಸೇವಾಕಾರ್ಯ ಎಲ್ಲರಿಗೂ ಪ್ರೇರಣೆಯಾಗಲಿ. ವಿದ್ಯಾರ್ಥಿನಿಯ ಈ ಸೇವಾ ಕಾರ್ಯಕ್ಕೆ ವಿದ್ಯಾರ್ಥಿನಿಯ ಕುಟುಂಬಸ್ಥರು, ಗ್ರಾಮಸ್ಥರು ಶಾಲಾ ಶಿಕ್ಷಕರು ಹಾಗೂ ಸಹಪಾಠಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

You may also like

News

ಪ್ರಸಿದ್ದ ಚಲನಚಿತ್ರ ನಟ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್ ರೈ ಮಾಣಿ ಇವರ ಮಗಳು ವೆನ್ಯ ರೈ ನಾಯಕಿಯಾಗಿ ನಟಿಸಿದ ‘ಆರಾಟ’ ಕನ್ನಡ ಸಿನಿಮಾ 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗೆ ಆಯ್ಕೆ

ಬೆಂಗಳೂರಿನಲ್ಲಿ ಮಾರ್ಚ್ 1ರಿಂದ 8ರ ತನಕ ನಡೆಯಲಿರುವ 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗೆ ಪ್ರಸಿದ್ದ ಚಲನಚಿತ್ರ ನಟ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್
News

 ಗೆಳೆಯರ ಬಳಗ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮ

ಗೆಳೆಯರ ಬಳಗ ಅಕ್ಷಯನಗರ (ರಿ.) ನಿಡಿಗಲ್ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮವು ಫೆಬ್ರವರಿ 9ರಂದು ಆದಿತ್ಯವಾರ ಕಲ್ಮಂಜ ಗ್ರಾಮದ ಅಕ್ಷಯನಗರದ ಕ್ರೀಡಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು.

You cannot copy content of this page