January 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಾರದ ಲೋಕಕ್ಕೆ ಪಯಣ ಬೆಳೆಸಿದ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ

ಯಕ್ಷಗಾನ ಹಾಸ್ಯ ಲೋಕಕ್ಕೆ ನವ ಮೆರಗು ನೀಡಿದ್ದ ಕಲಾವಿದ ಕಣ್ಮರೆ

ಬಂಟ್ವಾಳ : ಯಕ್ಷಗಾನ ಪ್ರದರ್ಶನಕ್ಕೆಂದು ಬೆಂಗಳೂರಿಗೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಅಕ್ಟೋಬರ್ 21ರಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಇಂದಿನಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿನ್ನೆ ಬೆಳಗ್ಗೆ ಬೆಂಗಳೂರಿನ ಆರ್.ಕೆ. ಭಟ್ಟರ ಮನೆಗೆ ತೆರಳಿದ್ದರು. ಹೃದಯ ಸ್ತಂಭನವಾದಾಗ ಜತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಇದೀಗ ಸ್ಥಳೀಯ ಆಸ್ಪತ್ರೆಯಲ್ಲಿರುವ ಮೃತದೇಹ ಆರ್.ಕೆ. ಭಟ್ಟರ ಮನೆಗೆ ಅಂತಿಮ ದರ್ಶನಕ್ಕೆ ತರಲಾಗುವುದು. ಬಳಿಕ ಆಂಬುಲೆನ್ಸ್ ಮೂಲಕ ಊರಿಗೆ ಸಾಗಲಿದೆ ಎಂದು ಭಾಗವತರಾದ ಗಿರೀಶ್ ರೈ ಕಕ್ಕೆಪದವು ತಿಳಿಸಿದ್ದಾರೆ.

You may also like

News

ಮಂಗಳೂರಿನಲ್ಲಿ 9ನೇ ಅಂತರ್‌ರಾಷ್ಟ್ರೀಯ ಗಾಳಿಪಟ ಉತ್ಸವ – ಜನವರಿ 17–18 ರಂದು ಬ್ಲೂ ಬೇ ಬೀಚ್‌ನಲ್ಲಿ ವೈಭವ

ಕರಾವಳಿ ಉತ್ಸವದ ಅಂಗವಾಗಿ ದೇಶದ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ‘ಟೀಮ್ ಮಂಗಳೂರು’ ಹವ್ಯಾಸಿ ಗಾಳಿಪಟ ತಂಡವು ಮಂಗಳೂರಿನ ತಣ್ಣೀರುಬಾವಿಯ ನವೀಕರಣಗೊಂಡ ಬ್ಲೂ ಬೇ ಬೀಚ್‌ನಲ್ಲಿ 9ನೇ ಅಂತರ್‌ರಾಷ್ಟ್ರೀಯ
News

ಧರ್ಮ ಕೇಳಿ ಅವಾಚ್ಯ ನಿಂದನೆ ಹಾಗೂ ಹಲ್ಲೆ – ಕೊಲೆಯತ್ನ ಪ್ರಕರಣದಲ್ಲಿ ಕಾವೂರು ಠಾಣಾ ಪೊಲೀಸರಿಂದ ಮೂವರ ಬಂಧನ

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಧರ್ಮ ವಿಚಾರಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

You cannot copy content of this page