September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಜ್ಞಾನದಿಂದ ಸುಜ್ಞಾನದೆಡೆಗೆ ಹಾದಿ ತೋರಿದ ಮಹಾನ್ ಮಾನವತಾವಾದಿ ನಾರಾಯಣ ಗುರುಗಳು – ರಾಜೇಶ್ ಸುವರ್ಣ

ಬಂಟ್ವಾಳ : ಅಗಾಧವಾದ ಧ್ಯಾನ ಶಕ್ತಿಯಿಂದ ಬುದ್ಧನಂತೆ ಕಂಗೊಳಿಸುತ್ತಿದ್ದ ನಾರಾಯಣಗುರುಗಳು ಜನರ ಅದರಲ್ಲೂ ಕೆಳಜಾತಿಗಳ ಆಕರ್ಷಣೆಯ ಕೇಂದ್ರ ಬಿಂದುವಾದರು. ತಾವು ಗಳಿಸಿದ ಅಪಾರವಾದ ಜ್ಞಾನ ಭಂಡಾರದಿಂದ ಜನರ ಅಜ್ಞಾನವ ಕಳೆದು ಸುಜ್ಞಾನವನಿತ್ತ ಮಹಾನ್ ಮಾನವತಾವಾದಿ ನಾರಾಯಣ ಗುರುಗಳು ಎಂದು ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ರಾಜೇಶ್ ಸುವರ್ಣ ತಿಳಿಸಿದರು.

ಅವರು ಅಕ್ಟೋಬರ್ 20ರಂದು ಬಂಟ್ವಾಳ ತಾಲೂಕಿನ ಪಚ್ಚಿನಡ್ಕ ನಯನಾ ಜಯಾ  ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 16ರಲ್ಲಿ ಗುರುಸಂದೇಶ ನೀಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ, ಆರೋಗ್ಯ ನಿರ್ದೇಶಕ ಮಹೇಶ್ ಬೊಳ್ಳಾಯಿ, ಮಾಜಿ ಅಧ್ಯಕ್ಷರಾದ, ನಾಗೇಶ್ ಪೊನ್ನೋಡಿ, ಪ್ರೇಮನಾಥ್ ಕರ್ಕೇರ, ಶಿವಾನಂದ ಎಂ., ಅರುಣ್ ಬಿ.ಸಿ. ರೋಡ್, ಸದಸ್ಯರಾದ ಯತೀಶ್ ಬೊಳ್ಳಾಯಿ, ಯಶೋಧರ ಕಡಂಬಲ್ಕೆ, ಮಲ್ಲಿಕಾ ಪಚ್ಚಿನಡ್ಕ, ಪ್ರಶಾಂತ್ ಏರಮಲೆ, ನಾಗೇಶ್ ಏಲಬೆ,  ಜಗದೀಶ್ ತುಂಬೆ, ಅರ್ಜುನ್ ಅರಳ, ಸುಲತಾ ಬಿ.ಸಿ. ರೋಡ್ ಮತ್ತಿತರರು ಉಪಸ್ಥಿತರಿದ್ದರು. ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿ ವಂದಿಸಿದರು.

You may also like

News

₹29 Lakh Donation to Father Muller for Paediatric Cancer Care Through ‘Symphony of Hope’

Music, compassion and community come together to support children battling cancer In a remarkable initiative that brought together music, compassion
News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ

You cannot copy content of this page