January 19, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಜ್ಞಾನದಿಂದ ಸುಜ್ಞಾನದೆಡೆಗೆ ಹಾದಿ ತೋರಿದ ಮಹಾನ್ ಮಾನವತಾವಾದಿ ನಾರಾಯಣ ಗುರುಗಳು – ರಾಜೇಶ್ ಸುವರ್ಣ

ಬಂಟ್ವಾಳ : ಅಗಾಧವಾದ ಧ್ಯಾನ ಶಕ್ತಿಯಿಂದ ಬುದ್ಧನಂತೆ ಕಂಗೊಳಿಸುತ್ತಿದ್ದ ನಾರಾಯಣಗುರುಗಳು ಜನರ ಅದರಲ್ಲೂ ಕೆಳಜಾತಿಗಳ ಆಕರ್ಷಣೆಯ ಕೇಂದ್ರ ಬಿಂದುವಾದರು. ತಾವು ಗಳಿಸಿದ ಅಪಾರವಾದ ಜ್ಞಾನ ಭಂಡಾರದಿಂದ ಜನರ ಅಜ್ಞಾನವ ಕಳೆದು ಸುಜ್ಞಾನವನಿತ್ತ ಮಹಾನ್ ಮಾನವತಾವಾದಿ ನಾರಾಯಣ ಗುರುಗಳು ಎಂದು ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ರಾಜೇಶ್ ಸುವರ್ಣ ತಿಳಿಸಿದರು.

ಅವರು ಅಕ್ಟೋಬರ್ 20ರಂದು ಬಂಟ್ವಾಳ ತಾಲೂಕಿನ ಪಚ್ಚಿನಡ್ಕ ನಯನಾ ಜಯಾ  ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 16ರಲ್ಲಿ ಗುರುಸಂದೇಶ ನೀಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ, ಆರೋಗ್ಯ ನಿರ್ದೇಶಕ ಮಹೇಶ್ ಬೊಳ್ಳಾಯಿ, ಮಾಜಿ ಅಧ್ಯಕ್ಷರಾದ, ನಾಗೇಶ್ ಪೊನ್ನೋಡಿ, ಪ್ರೇಮನಾಥ್ ಕರ್ಕೇರ, ಶಿವಾನಂದ ಎಂ., ಅರುಣ್ ಬಿ.ಸಿ. ರೋಡ್, ಸದಸ್ಯರಾದ ಯತೀಶ್ ಬೊಳ್ಳಾಯಿ, ಯಶೋಧರ ಕಡಂಬಲ್ಕೆ, ಮಲ್ಲಿಕಾ ಪಚ್ಚಿನಡ್ಕ, ಪ್ರಶಾಂತ್ ಏರಮಲೆ, ನಾಗೇಶ್ ಏಲಬೆ,  ಜಗದೀಶ್ ತುಂಬೆ, ಅರ್ಜುನ್ ಅರಳ, ಸುಲತಾ ಬಿ.ಸಿ. ರೋಡ್ ಮತ್ತಿತರರು ಉಪಸ್ಥಿತರಿದ್ದರು. ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿ ವಂದಿಸಿದರು.

You may also like

News

ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಎಸ್. ನಂಜುಂಡಯ್ಯ ಚಾಮರಾಜನಗರ ಆಯ್ಕೆ

ಕಾಸರಗೋಡು : ಸಂಘಟಕ, ಸಾಹಿತಿ ಶಿಕ್ಷಕ, ಸಾಹಿತ್ಯ ಪರಿಷತ್, ಜಾನಪದ ಪರಿಷತ್ ಮೊದಲಾಗಿ ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಹೆಚ್ಚಿನ ಸಂಘ, ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಎಸ್.
News

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ

You cannot copy content of this page