March 26, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶೌರ್ಯ ವಿಪತ್ತು ನಿರ್ವಹಣ ಘಟಕ ಶಂಬೂರ್ ಇದರ ಮಾಸಿಕ ಸಭೆ ಹಾಗೂ ಶ್ರಮದಾನ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣ  ಘಟಕ ಶಂಬೂರ್ ಇದರ ಮಾಸಿಕ ಸಭೆ ಹಾಗೂ ಶ್ರಮದಾನ ಅಕ್ಟೋಬರ್ 20ರಂದು ಜರುಗಿತು. ಮಾಸಿಕ ಸಭೆಯು ಶಂಭೂರು ಗ್ರಾಮದ ಬೈಪಾಡಿ ಕೃಷ್ಣಪ್ಪ ನಾಯ್ಕರವರ ಮನೆಯಲ್ಲಿ ವಲಯ ಮೇಲ್ವಿಚಾರಕಿ ಅಮಿತಾರವರ ಉಪಸ್ಥಿತಿಯಲ್ಲಿ ನಡೆಸಿ ಘಟಕದ ಜವಾಬ್ದಾರಿಯ ಬಗ್ಗೆ ಮೇಲ್ವಿಚಾರಕರು ಮಾಹಿತಿ ನೀಡಿದರು.

ತದನಂತರ ಘಟಕದ ಸದಸ್ಯರು ನರಿಕೊಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಡಿ ಗುರಿಯಿಂದ ನಾಟಿಯವರಿಗೆ ಮಾರ್ಗದ ಬದಿಯಲ್ಲಿ ಬೆಳೆದ ಬಲ್ಲೆ, ಗಿಡ ಗಂಟೆಗಳನ್ನು ಕಡಿದು ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಲಾಯಿತು.

ಈ ಸಂದರ್ಭ ಜನಜಾಗೃತಿ ವಲಯ ಸದಸ್ಯ ಪುರುಷೋತ್ತಮ್, ಗ್ರಾಮ ಪಂಚಾಯತಿ ಸದಸ್ಯ ಪ್ರಕಾಶ್ ಎಂ. ಮಡಿಮುಗೇರು, ಘಟಕದ ಪ್ರತಿನಿಧಿ ಕೃಷ್ಣಪ್ಪ ನಾಯ್ಕ್, ಸಂಯೋಜಕಿ ಲಕ್ಷ್ಮೀ, ಘಟಕದ  ಸದಸ್ಯರುಗಳಾದ ವಾಮನ, ಸುರೇಶ್, ಹರೀಶ್, ಪ್ರಕಾಶ್, ಸನತ್, ಶಿವಶಂಕರ್, ಪ್ರೇಮಲತಾ, ಬಬಿತ, ಅಕ್ಕಮ್ಮ, ಗೀತಾ, ಶ್ರೀಮತಿ ಹಾಗೂ ಪುರುಷೋತ್ತಮ  ಉಪಸ್ಥಿತರಿದ್ದರು.

You may also like

News

ದಲಿತ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಕೆ ಡಿಎಚ್ಎಸ್ ಒತ್ತಾಯ – ಕಠಿಣ ಕ್ರಮಕ್ಕೆ ಆಗ್ರಹ

ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬವನು ನಿರಂತರ ಲೈಂಗಿಕ ಕಿರುಕುಳ ನೀಡುವ ಮೂಲಕ ಮಾನಸಿಕ
News

ನೇತ್ರದಾನದಿಂದ ಇನ್ನೊಬ್ಬರ ಬಾಳಿಗೆ ಬೆಳಕು – ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ

ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು. ದಕ್ಷಿಣ ಕನ್ನಡ

You cannot copy content of this page