July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶೌರ್ಯ ವಿಪತ್ತು ನಿರ್ವಹಣ ಘಟಕ ಶಂಬೂರ್ ಇದರ ಮಾಸಿಕ ಸಭೆ ಹಾಗೂ ಶ್ರಮದಾನ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣ  ಘಟಕ ಶಂಬೂರ್ ಇದರ ಮಾಸಿಕ ಸಭೆ ಹಾಗೂ ಶ್ರಮದಾನ ಅಕ್ಟೋಬರ್ 20ರಂದು ಜರುಗಿತು. ಮಾಸಿಕ ಸಭೆಯು ಶಂಭೂರು ಗ್ರಾಮದ ಬೈಪಾಡಿ ಕೃಷ್ಣಪ್ಪ ನಾಯ್ಕರವರ ಮನೆಯಲ್ಲಿ ವಲಯ ಮೇಲ್ವಿಚಾರಕಿ ಅಮಿತಾರವರ ಉಪಸ್ಥಿತಿಯಲ್ಲಿ ನಡೆಸಿ ಘಟಕದ ಜವಾಬ್ದಾರಿಯ ಬಗ್ಗೆ ಮೇಲ್ವಿಚಾರಕರು ಮಾಹಿತಿ ನೀಡಿದರು.

ತದನಂತರ ಘಟಕದ ಸದಸ್ಯರು ನರಿಕೊಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಡಿ ಗುರಿಯಿಂದ ನಾಟಿಯವರಿಗೆ ಮಾರ್ಗದ ಬದಿಯಲ್ಲಿ ಬೆಳೆದ ಬಲ್ಲೆ, ಗಿಡ ಗಂಟೆಗಳನ್ನು ಕಡಿದು ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಲಾಯಿತು.

ಈ ಸಂದರ್ಭ ಜನಜಾಗೃತಿ ವಲಯ ಸದಸ್ಯ ಪುರುಷೋತ್ತಮ್, ಗ್ರಾಮ ಪಂಚಾಯತಿ ಸದಸ್ಯ ಪ್ರಕಾಶ್ ಎಂ. ಮಡಿಮುಗೇರು, ಘಟಕದ ಪ್ರತಿನಿಧಿ ಕೃಷ್ಣಪ್ಪ ನಾಯ್ಕ್, ಸಂಯೋಜಕಿ ಲಕ್ಷ್ಮೀ, ಘಟಕದ  ಸದಸ್ಯರುಗಳಾದ ವಾಮನ, ಸುರೇಶ್, ಹರೀಶ್, ಪ್ರಕಾಶ್, ಸನತ್, ಶಿವಶಂಕರ್, ಪ್ರೇಮಲತಾ, ಬಬಿತ, ಅಕ್ಕಮ್ಮ, ಗೀತಾ, ಶ್ರೀಮತಿ ಹಾಗೂ ಪುರುಷೋತ್ತಮ  ಉಪಸ್ಥಿತರಿದ್ದರು.

You may also like

News

SJEC’s Nikhil A. Poojary to Represent India at International Yoga Championship

Saint Joseph Engineering College (SJEC) Vamanjoor has added another feather to its cap with the outstanding achievement of Nikhil A.
News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ

You cannot copy content of this page