August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನಲ್ಲಿ ಮಧ್ಯಾಹ್ನದ ಉಚಿತ ಬಿಸಿಯೂಟ ಯೋಜನೆಗೆ ಚಾಲನೆ

ಬಂಟ್ವಾಳ:  ಶ್ರೀ ವೆಂಕಟರಮಣ ಸ್ವಾಮೀ ವಿದ್ಯಾವರ್ಧಕ ಸಂಘ ವಿದ್ಯಾಗಿರಿ ಬಂಟ್ವಾಳ, ಇದರ ವತಿಯಿಂದ ಶ್ರೀ ವೆಂಕಟರಮಣ ಸ್ವಾಮಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಘದ ಸದಸ್ಯ ಶ್ರೀ ರಾಘವೇಂದ್ರ ಕೂಡಿಗೆ ಶೆಣೈ ಅವರು ತಾಯಿ ಸವಿತಾ ಕೂಡಿಗೆ ಶೆಣೈ ಅವರ ಸ್ಮರಣಾರ್ಥ ನೀಡಲಾಗುವ ಮಧ್ಯಾಹ್ನದ ಉಚಿತ ಬಿಸಿಯೂಟ ಯೋಜನೆಗೆ ಅಕ್ಟೋಬರ್ 23ರಂದು ಬುಧವಾರ ಚಾಲನೆ ನೀಡಲಾಯಿತು.

ಜೆಸಿಐ ವಲಯ ತರಬೇತುದಾರ ಪತ್ರಕರ್ತ ಸಂದೀಪ್ ಸಾಲ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಫಲಾನುಭವಿ ವಿದ್ಯಾರ್ಥಿಗಳಿಗೆ ಕಾರ್ಡ್ ವಿತರಿಸಿ ಮಾತನಾಡಿ ದೂರದೂರುಗಳಿಂದ ಬರುವ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಈ ಯೋಜನೆ ಜಾರಿಗೊಳಿಸಿರುವುದು ಅಭಿನಂದನೀಯ. ವಿದ್ಯಾರ್ಥಿಗಳು ಇದರ ಮಹತ್ವವನ್ನು ಅರಿತುಕೊಂಡು ಯೋಜನೆ ಯಶಸ್ವಿಯಾಗಿ ಸಾಕಾರಗೊಳ್ಳಲು ಸಹಕರಿಸುವಂತೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಸುಯೋಗ ವರ್ಧನ್ ಡಿ.ಎಂ. ಅವರು ಮಾತನಾಡಿ ಕೋವಿಡ್ ಬಳಿಕ ಕಾರಣಾಂತರಗಳಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಆಡಳಿತ ಮಂಡಳಿಯ ತೀರ್ಮಾನದಂತೆ ಈ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುದರ್ಶನ್ ಬಿ. ಸ್ವಾಗತಿಸಿದರು. ಕನ್ನಡ ಪ್ರಾಧ್ಯಾಪಕ ಮನೋಹರ ಶಾಂತಪ್ಪ ದೊಡ್ಡಮನಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

You may also like

News

ಮಡಂತ್ಯಾರಿನ ಶಾನ್ವಿ ಮತ್ತು ಶ್ರೇಯಸ್‌ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಗೌರವ

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್‌ (ರಿ.), ಕರ್ನಾಟಕ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಸ್ವಾತಂತ್ರ್ಯೋತ್ಸವ–2026’ ಕಾರ್ಯಕ್ರಮದಲ್ಲಿ ಮಡಂತ್ಯಾರಿನ ಪ್ರತಿಭೆಗಳಾದ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ಅವರಿಗೆ
News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ

You cannot copy content of this page