January 19, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರೈತ ಸಂಘ ಬಂಟ್ವಾಳ ತಾಲೂಕು ಘಟಕದ ಪುನರ್ರಚನೆ ಹಾಗೂ ಅಮ್ಟಾಡಿ ಗ್ರಾಮ ಘಟಕ ಉದ್ಘಾಟನೆ

ಬಂಟ್ವಾಳ : ರೈತ ಸಂಘ ಬಂಟ್ವಾಳ ತಾಲೂಕು ಘಟಕದ ಪುನರ್ರಚನೆ ಹಾಗೂ ನೂತನವಾಗಿ ಅಮ್ಟಾಡಿ ಗ್ರಾಮ ಘಟಕದ ಉದ್ಘಾಟನೆಯು ಅಮ್ಡಾಡಿ ಗ್ರಾಮದ ಅಂಭೇಡ್ಕರ್ ಭವನದಲ್ಲಿ ಇತ್ತೀಚೆಗೆ ನಡೆಯಿತು. ಸಂಘದ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಿತಿಯ ಖಾಯಂ‌‌ ಆಹ್ವಾನಿತರಾದ ಸನ್ನಿ ಡಿಸೋಜ ನೀರುಮಾರ್ಗ, ಎ.ಐ.ಟಿ.ಯು.ಸಿ. ರಾಜ್ಯ ಸಮಿತಿ ಸದಸ್ಯ ಹಾಗೂ ಜಿಲ್ಲಾಧ್ಯಕ್ಷ (ಕಾರ್ಮಿಕ ಸಂಘಟನೆ) ರಾಮಣ್ಣ ವಿಟ್ಲ, ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಡಿ.ಕೆ. ಹಮೀದ್ ಕನ್ಯಾನ, ಜಿಲ್ಲಾ ಉಪಾಧ್ಯಕ್ಷ ಅಲ್ವೀನ್ ಮೀನೆಜಸ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನಡೆಯಿತು.

ಬಂಟ್ವಾಳ ತಾಲೂಕು ಘಟಕದ ಗೌರವಾಧ್ಯಕ್ಷರಾಗಿ ಅಲ್ವೀನ್ ಲೋಬೋ, ಅಧ್ಯಕ್ಷರಾಗಿ ಸದಾನಂದ ಶೀತಲ್, ಪ್ರಧಾನ ಕಾರ್ಯದರ್ಶಿಯಾಗಿ ಆಲೆಕ್ಸ್ ರೊಡ್ರಿಗಸ್, ಉಪಾಧ್ಯಕ್ಷರಾಗಿ ದಾಮೋದರ ಶೆಟ್ಟಿ ಹಾಗೂ ಸಂಜೀವ ಶೆಟ್ಟಿ, ಕೋಶಾಧಿಕಾರಿಯಾಗಿ ಅಲ್ವೀನ್ ಡಿಸೋಜ, ಸಂಘಟನಾ ಕಾರ್ಯದರ್ಶಿಯಾಗಿ ನವೀನ್ ಡಿಸೋಜ ಆಯ್ಕೆಯಾದರು.

ನೂತನ ಅಮ್ಟಾಡಿ ಗ್ರಾಮ ಘಟಕದ ಅಧ್ಯಕ್ಷರಾಗಿ ಜೀವನ್ ಲೋಬೋ, ಪ್ರಧಾನ ಕಾರ್ಯದರ್ಶಿಯಾಗಿ ಲೋಕೇಶ್ ಸುವರ್ಣ, ಜತೆ ಕಾರ್ಯದರ್ಶಿಯಾಗಿ ಅರುಣ್ ಪಿಂಟೋ, ಉಪಾಧ್ಯಕ್ಷರುಗಳಾಗಿ ವಲೇರಿಯನ್ ಡಿಸೋಜ, ಗ್ರೇಸಿ ಮೊಂತೆರೊ, ನವೀನ್ ಡಿಸೋಜ, ಕೋಶಾಧಿಕಾರಿಯಾಗಿ ಕಿರಣ್ ಪಿಂಟೋ, ಸಂಘಟನಾ ಕಾರ್ಯದರ್ಶಿಯಾಗಿ ಸುನೀಲ್ ಕುಮಾರ್ ಆಯ್ಕೆಯಾದರು.

You may also like

News

ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಎಸ್. ನಂಜುಂಡಯ್ಯ ಚಾಮರಾಜನಗರ ಆಯ್ಕೆ

ಕಾಸರಗೋಡು : ಸಂಘಟಕ, ಸಾಹಿತಿ ಶಿಕ್ಷಕ, ಸಾಹಿತ್ಯ ಪರಿಷತ್, ಜಾನಪದ ಪರಿಷತ್ ಮೊದಲಾಗಿ ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಹೆಚ್ಚಿನ ಸಂಘ, ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಎಸ್.
News

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ

You cannot copy content of this page