April 21, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರೈತ ಸಂಘ ಬಂಟ್ವಾಳ ತಾಲೂಕು ಘಟಕದ ಪುನರ್ರಚನೆ ಹಾಗೂ ಅಮ್ಟಾಡಿ ಗ್ರಾಮ ಘಟಕ ಉದ್ಘಾಟನೆ

ಬಂಟ್ವಾಳ : ರೈತ ಸಂಘ ಬಂಟ್ವಾಳ ತಾಲೂಕು ಘಟಕದ ಪುನರ್ರಚನೆ ಹಾಗೂ ನೂತನವಾಗಿ ಅಮ್ಟಾಡಿ ಗ್ರಾಮ ಘಟಕದ ಉದ್ಘಾಟನೆಯು ಅಮ್ಡಾಡಿ ಗ್ರಾಮದ ಅಂಭೇಡ್ಕರ್ ಭವನದಲ್ಲಿ ಇತ್ತೀಚೆಗೆ ನಡೆಯಿತು. ಸಂಘದ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಿತಿಯ ಖಾಯಂ‌‌ ಆಹ್ವಾನಿತರಾದ ಸನ್ನಿ ಡಿಸೋಜ ನೀರುಮಾರ್ಗ, ಎ.ಐ.ಟಿ.ಯು.ಸಿ. ರಾಜ್ಯ ಸಮಿತಿ ಸದಸ್ಯ ಹಾಗೂ ಜಿಲ್ಲಾಧ್ಯಕ್ಷ (ಕಾರ್ಮಿಕ ಸಂಘಟನೆ) ರಾಮಣ್ಣ ವಿಟ್ಲ, ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಡಿ.ಕೆ. ಹಮೀದ್ ಕನ್ಯಾನ, ಜಿಲ್ಲಾ ಉಪಾಧ್ಯಕ್ಷ ಅಲ್ವೀನ್ ಮೀನೆಜಸ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನಡೆಯಿತು.

ಬಂಟ್ವಾಳ ತಾಲೂಕು ಘಟಕದ ಗೌರವಾಧ್ಯಕ್ಷರಾಗಿ ಅಲ್ವೀನ್ ಲೋಬೋ, ಅಧ್ಯಕ್ಷರಾಗಿ ಸದಾನಂದ ಶೀತಲ್, ಪ್ರಧಾನ ಕಾರ್ಯದರ್ಶಿಯಾಗಿ ಆಲೆಕ್ಸ್ ರೊಡ್ರಿಗಸ್, ಉಪಾಧ್ಯಕ್ಷರಾಗಿ ದಾಮೋದರ ಶೆಟ್ಟಿ ಹಾಗೂ ಸಂಜೀವ ಶೆಟ್ಟಿ, ಕೋಶಾಧಿಕಾರಿಯಾಗಿ ಅಲ್ವೀನ್ ಡಿಸೋಜ, ಸಂಘಟನಾ ಕಾರ್ಯದರ್ಶಿಯಾಗಿ ನವೀನ್ ಡಿಸೋಜ ಆಯ್ಕೆಯಾದರು.

ನೂತನ ಅಮ್ಟಾಡಿ ಗ್ರಾಮ ಘಟಕದ ಅಧ್ಯಕ್ಷರಾಗಿ ಜೀವನ್ ಲೋಬೋ, ಪ್ರಧಾನ ಕಾರ್ಯದರ್ಶಿಯಾಗಿ ಲೋಕೇಶ್ ಸುವರ್ಣ, ಜತೆ ಕಾರ್ಯದರ್ಶಿಯಾಗಿ ಅರುಣ್ ಪಿಂಟೋ, ಉಪಾಧ್ಯಕ್ಷರುಗಳಾಗಿ ವಲೇರಿಯನ್ ಡಿಸೋಜ, ಗ್ರೇಸಿ ಮೊಂತೆರೊ, ನವೀನ್ ಡಿಸೋಜ, ಕೋಶಾಧಿಕಾರಿಯಾಗಿ ಕಿರಣ್ ಪಿಂಟೋ, ಸಂಘಟನಾ ಕಾರ್ಯದರ್ಶಿಯಾಗಿ ಸುನೀಲ್ ಕುಮಾರ್ ಆಯ್ಕೆಯಾದರು.

You may also like

News

MLC ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಂದ ಬಿಷಪ್ಸ್ ಹೌಸ್ ನಲ್ಲಿ ಪೋಪ್ ರವರಿಗೆ ಅಂತಿಮ ನಮನ

ಕ್ರಿಶ್ಚಿಯನ್ನರ ಪರಮೋಚ್ಚ ಜಗದ್ಗುರು ಪೋಪ್ ಫ್ರಾನ್ಸಿಸ್ ರವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಂದು ಎಪ್ರಿಲ್ 21ರಂದು ಸೋಮವಾರ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್
News

ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಮತ್ತು ಆಧುನಿಕ ರೋಮನ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪರಿವರ್ತನಾಶೀಲ ವ್ಯಕ್ತಿಯಾಗಿದ್ದ ಜಗದ್ಗುರು ಪೋಪ್ ಫ್ರಾನ್ಸಿಸ್ ಇಂದು ಏಪ್ರಿಲ್ 21ರಂದು ಸೋಮವಾರ ತಮ್ಮ 88

You cannot copy content of this page